ಬೆಂಗಳೂರು: ಮುಡಾ ಹಗರಣದ ತನಿಖೆ ಕುರಿತು ಪ್ರತಿಪಕ್ಷಗಳ ಅಹೋರಾತ್ರಿ ಪ್ರತಿಭಟನೆಗೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ ಅವರು, ನನ್ನ ಹೆಸರಿಗೆ ಮಸಿ ಬಳಿಯಲು, ನನ್ನ ವಿರುದ್ಧ ಹೊಟ್ಟೆಕಿಚ್ಚಿನಿಂದ ವಿಪಕ್ಷಗಳು ಮುಡಾ ಹಗರಣ ಎಂದು ಹೇಳಿಕೊಂಡು ರಾಜಕೀಯ ಮಾಡುತ್ತಿವೆ.
ಬಿಜೆಪಿ ಹಾಗೂ ಜೆಡಿಎಸ್ನವರು ವಿಷಯ ಇಲ್ಲದ್ದನ್ನೂ ವಿಷಯವಾಗಿ ಮಾಡಿಕೊಳ್ಳುತ್ತಿದ್ದಾರೆ. ಸುಮ್ಮನೆ ಮುಡಾ ವಿಷಯ ಇಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ನಾನು ನಿಯಮಾವಳಿ ಪ್ರಕಾರವೇ ಸೈಟ್ ಪಡೆದುಕೊಂಡಿದ್ದೇನೆ. ಕಾನೂನು ಪ್ರಕಾರವೇ ಎಲ್ಲಾ ಆಗಿದೆ. ಬಿಜೆಪಿ ಅವಧಿಯಲ್ಲೇ ನಾನು ಸೈಟ್ ಪಡೆದಿದ್ದೇನೆ. ಇದೆಲ್ಲವನ್ನು ನೋಡದೇ ಬಿಜೆಪಿಯವರು ಈಗ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಪಕ್ಷಗಳ ಪ್ರತಿಭಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಕಳೆದ 40 ವರ್ಷಗಳಿಂದ ನನ್ನ ಮೇಲೆ ಯಾವುದೇ ಕಪ್ಪು ಚುಕ್ಕೆ ಇಲ್ಲ. ಹೀಗಾಗಿ ನನ್ನ ಮೇಲೆ ವಿಪಕ್ಷಗಳಿಗೆ ಹೊಟ್ಟೆಕಿಚ್ಚು. ಹೀಗಾಗಿ ಸದನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧ ಕಿಡಿಕಾರಿದರು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…