ಬೆಂಗಳೂರು: ಮುಡಾ ಹಗರಣದ ತನಿಖೆ ಕುರಿತು ಪ್ರತಿಪಕ್ಷಗಳ ಅಹೋರಾತ್ರಿ ಪ್ರತಿಭಟನೆಗೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ ಅವರು, ನನ್ನ ಹೆಸರಿಗೆ ಮಸಿ ಬಳಿಯಲು, ನನ್ನ ವಿರುದ್ಧ ಹೊಟ್ಟೆಕಿಚ್ಚಿನಿಂದ ವಿಪಕ್ಷಗಳು ಮುಡಾ ಹಗರಣ ಎಂದು ಹೇಳಿಕೊಂಡು ರಾಜಕೀಯ ಮಾಡುತ್ತಿವೆ.
ಬಿಜೆಪಿ ಹಾಗೂ ಜೆಡಿಎಸ್ನವರು ವಿಷಯ ಇಲ್ಲದ್ದನ್ನೂ ವಿಷಯವಾಗಿ ಮಾಡಿಕೊಳ್ಳುತ್ತಿದ್ದಾರೆ. ಸುಮ್ಮನೆ ಮುಡಾ ವಿಷಯ ಇಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ನಾನು ನಿಯಮಾವಳಿ ಪ್ರಕಾರವೇ ಸೈಟ್ ಪಡೆದುಕೊಂಡಿದ್ದೇನೆ. ಕಾನೂನು ಪ್ರಕಾರವೇ ಎಲ್ಲಾ ಆಗಿದೆ. ಬಿಜೆಪಿ ಅವಧಿಯಲ್ಲೇ ನಾನು ಸೈಟ್ ಪಡೆದಿದ್ದೇನೆ. ಇದೆಲ್ಲವನ್ನು ನೋಡದೇ ಬಿಜೆಪಿಯವರು ಈಗ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಪಕ್ಷಗಳ ಪ್ರತಿಭಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಕಳೆದ 40 ವರ್ಷಗಳಿಂದ ನನ್ನ ಮೇಲೆ ಯಾವುದೇ ಕಪ್ಪು ಚುಕ್ಕೆ ಇಲ್ಲ. ಹೀಗಾಗಿ ನನ್ನ ಮೇಲೆ ವಿಪಕ್ಷಗಳಿಗೆ ಹೊಟ್ಟೆಕಿಚ್ಚು. ಹೀಗಾಗಿ ಸದನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧ ಕಿಡಿಕಾರಿದರು.
ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…
ಬೆಂಗಳೂರು: ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…
ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…
ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…
ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…
ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…