Mysore
21
overcast clouds

Social Media

ಬುಧವಾರ, 05 ಆಗಸ್ಟ್ 2026
Light
Dark

ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ: ಡಿಸಿಎಂ ಡಿ.ಕೆ.ಶಿವಕುಮಾರ್‌ ಫಸ್ಟ್‌ ರಿಯಾಕ್ಷನ್

ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ.

ನನ್ನ ಪ್ರಕಾರ ಸಿದ್ದರಾಮಯ್ಯರದ್ದು ಯಾವುದೇ ತಪ್ಪು ಮಾಡಿಲ್ಲ. ಕೋರ್ಟ್‌ ಆದೇಶದ ಪ್ರತಿ ನೋಡಿ ಪ್ರತಿಕ್ರಿಯೆ ನೀಡುತ್ತೇನೆ ಎಂದರು.

ಯಾವುದೇ ತನಿಖೆ ಮಾಡಿದ್ರೂ ಸಿಎಂ ಸಿದ್ದರಾಮಯ್ಯ ಕ್ಲೀನ್‌ ಆಗಿ ಹೊರಬರುತ್ತಾರೆ. ಅವರು ಮಾಡಿರುವ ಕಾರ್ಯಕ್ರಮ, ಕೊಡುಗೆಗಳನ್ನು ಬಿಜೆಪಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ವಿಪಕ್ಷದವರ ವಿರುದ್ಧ ಗಂಭೀರ ಆರೋಪ ಮಾಡಿದರು.

 

Tags:
error: Content is protected !!