ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜನ ಪ್ರತಿನಿಧಿಗಳ ನ್ಯಾಯಾಲಯ ಸಿಬಿಐ ತನಿಖೆಗೆ ಆದೇಶ ನೀಡಿದ್ದು, ಇದೀಗ ತನಿಖೆಯಿಂದ ತಪ್ಪಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ಮಾಡಿದ್ದಾರೆ ಎಂಬ ಅರೋಪಗಳು ಕೇಳಿ ಬಂದಿವೆ.
ಮುಡಾ ಹಗರಣದ ತನಿಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಿಬಿಐ ತನಿಖೆಯ ಸಂಕಷ್ಟ ಎದುರಾಗಿದ್ದು, ಸಿಬಿಐ ನೇರ ತನಿಖೆಯಿಂದ ಪಾರಾಗುವುದಕ್ಕೆ ಸಚಿವ ಸಂಪುಟವೇ ಅವರ ಬೆನ್ನಿಗೆ ನಿಂತಿದೆ.
ಮುಡಾ ಪ್ರಕರಣದಲ್ಲಿ ದೂರುದಾರ ಕೋರ್ಟ್ ಆದೇಶ ಪಡೆದು ನೇರವಾಗಿ ಸಿಬಿಐಗೆ ದೂರು ನೀಡಿದ್ದೆ ಆದ್ದಲ್ಲಿ ಆಗ ಮಾತ್ರ ಯಾವುದೇ ನಿಯಂತ್ರಣವಿಲ್ಲದೆ ಕೇಂದ್ರ ತನಿಖಾ ಸಂಸ್ಥೆ ತನಿಖೆ ನಡೆಸಲು ಪ್ರಾರಂಭಿಸುತ್ತದೆ. ಹೀಗಾಗಿ ರಾಜ್ಯ ಸರ್ಕಾರ ಸಿಬಿಐ ಮುಕ್ತ ತನಿಖೆಗೆ ಇರುವ ಅವಕಾಶವನ್ನು ಹಿಂಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ.
ಇನ್ನು ರಾಜ್ಯಪಾಲರು, ಮುಖ್ಯಮಂತ್ರಿ ಮತ್ತು ಸಚಿವರ ವಿರುದ್ಧ ಕೇಳಿ ಬಂದಿರುವ ಆರೋಪಗಳ ಕುರಿತು ಮುಖ್ಯ ಕಾರ್ಯದರ್ಶಿಗಳ ಹತ್ತಿರ ಮಾಹಿತಿ ಕೇಳುತ್ತಿದ್ದರು. ಈ ವಿಚಾರದಿಂದ ಸರ್ಕಾರಕ್ಕೆ ಭಾರಿ ಮುಜಗರ ಉಂಟಾಗಿತ್ತು. ಆದ ಕಾರಣ ಸಚಿವ ಸಂಪುಟದಲ್ಲಿ ರಾಜ್ಯಪಾಲರು ಕೇಳುವ ಮಾಹಿತಿಗೆ ಸಿಎಸ್ ನೀಡುವಂತಿಲ್ಲ. ಅದರ ಬದಲಿಗೆ ಮುಖ್ಯ ಕಾರ್ಯದರ್ಶಿಗಳು ಸಚಿವ ಸಂಪುಟದ ಗಮನಕ್ಕೆ ತಂದು ಆ ನಂತರ ರಾಜ್ಯಪಾಲರಿಗೆ ಕ್ಯಾಬಿನೆಟ್ ಮುಖಾಂತರವೇ ಉತ್ತರ ಹೋಗಬೇಕು ಎಂದು ನಿರ್ಣಯ ಕೈಕೊಳ್ಳಲಾಗಿದೆ. ಅಲ್ಲದೇ ಮುಡಾ ಪ್ರಕರಣದಲ್ಲಿ ಸಿಬಿಐ ಮುಕ್ತ ತನಿಖಾ ಅವಕಾಶಕ್ಕೆ ತಡೆಯಾಗುವ ಮೂಲಕ ಸರ್ಕಾರದ ವಿರುದ್ಧ ಪತ್ರ ಸಮರ ಆರಂಭ ಮಾಡಿದ್ದ ರಾಜ್ಯಪಾಲರಿಗೂ ತಿರುಗೇಟು ನೀಡುವಂತೆ ಮಾಡಲು ಸಚಿವ ಸಂಪುಟ ನಿರ್ಧರಿಸಿದೆ.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ…
ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ…