ರಾಜ್ಯ

ಮುಡಾ ಪ್ರಕರಣ: ಸಿಬಿಐ ತನಿಖೆ ತಡೆಯಲು ಸಿಎಂ ಸಿದ್ದರಾಮಯ್ಯ ಮಾಸ್ಟರ್‌ ಪ್ಲಾನ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜನ ಪ್ರತಿನಿಧಿಗಳ ನ್ಯಾಯಾಲಯ ಸಿಬಿಐ ತನಿಖೆಗೆ ಆದೇಶ ನೀಡಿದ್ದು, ಇದೀಗ ತನಿಖೆಯಿಂದ ತಪ್ಪಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಮಾಸ್ಟರ್‌ ಪ್ಲಾನ್‌ ಮಾಡಿದ್ದಾರೆ ಎಂಬ ಅರೋಪಗಳು ಕೇಳಿ ಬಂದಿವೆ.

ಮುಡಾ ಹಗರಣದ ತನಿಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಿಬಿಐ ತನಿಖೆಯ ಸಂಕಷ್ಟ ಎದುರಾಗಿದ್ದು, ಸಿಬಿಐ ನೇರ ತನಿಖೆಯಿಂದ ಪಾರಾಗುವುದಕ್ಕೆ ಸಚಿವ ಸಂಪುಟವೇ ಅವರ ಬೆನ್ನಿಗೆ ನಿಂತಿದೆ.

ಮುಡಾ ಪ್ರಕರಣದಲ್ಲಿ ದೂರುದಾರ ಕೋರ್ಟ್‌ ಆದೇಶ ಪಡೆದು ನೇರವಾಗಿ ಸಿಬಿಐಗೆ ದೂರು ನೀಡಿದ್ದೆ ಆದ್ದಲ್ಲಿ ಆಗ ಮಾತ್ರ ಯಾವುದೇ ನಿಯಂತ್ರಣವಿಲ್ಲದೆ ಕೇಂದ್ರ ತನಿಖಾ ಸಂಸ್ಥೆ ತನಿಖೆ ನಡೆಸಲು ಪ್ರಾರಂಭಿಸುತ್ತದೆ. ಹೀಗಾಗಿ ರಾಜ್ಯ ಸರ್ಕಾರ ಸಿಬಿಐ ಮುಕ್ತ ತನಿಖೆಗೆ ಇರುವ ಅವಕಾಶವನ್ನು ಹಿಂಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ.

ಇನ್ನು ರಾಜ್ಯಪಾಲರು, ಮುಖ್ಯಮಂತ್ರಿ ಮತ್ತು ಸಚಿವರ ವಿರುದ್ಧ ಕೇಳಿ ಬಂದಿರುವ ಆರೋಪಗಳ ಕುರಿತು ಮುಖ್ಯ ಕಾರ್ಯದರ್ಶಿಗಳ ಹತ್ತಿರ ಮಾಹಿತಿ ಕೇಳುತ್ತಿದ್ದರು. ಈ ವಿಚಾರದಿಂದ ಸರ್ಕಾರಕ್ಕೆ ಭಾರಿ ಮುಜಗರ ಉಂಟಾಗಿತ್ತು. ಆದ ಕಾರಣ ಸಚಿವ ಸಂಪುಟದಲ್ಲಿ ರಾಜ್ಯಪಾಲರು ಕೇಳುವ ಮಾಹಿತಿಗೆ ಸಿಎಸ್‌ ನೀಡುವಂತಿಲ್ಲ. ಅದರ ಬದಲಿಗೆ ಮುಖ್ಯ ಕಾರ್ಯದರ್ಶಿಗಳು ಸಚಿವ ಸಂಪುಟದ ಗಮನಕ್ಕೆ ತಂದು ಆ ನಂತರ ರಾಜ್ಯಪಾಲರಿಗೆ ಕ್ಯಾಬಿನೆಟ್‌ ಮುಖಾಂತರವೇ ಉತ್ತರ ಹೋಗಬೇಕು ಎಂದು ನಿರ್ಣಯ ಕೈಕೊಳ್ಳಲಾಗಿದೆ. ಅಲ್ಲದೇ ಮುಡಾ ಪ್ರಕರಣದಲ್ಲಿ ಸಿಬಿಐ ಮುಕ್ತ ತನಿಖಾ ಅವಕಾಶಕ್ಕೆ ತಡೆಯಾಗುವ ಮೂಲಕ ಸರ್ಕಾರದ ವಿರುದ್ಧ ಪತ್ರ ಸಮರ ಆರಂಭ ಮಾಡಿದ್ದ ರಾಜ್ಯಪಾಲರಿಗೂ ತಿರುಗೇಟು ನೀಡುವಂತೆ ಮಾಡಲು ಸಚಿವ ಸಂಪುಟ ನಿರ್ಧರಿಸಿದೆ.

ಆಂದೋಲನ ಡೆಸ್ಕ್

Recent Posts

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

23 mins ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

5 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

5 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

6 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

16 hours ago