ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜನ ಪ್ರತಿನಿಧಿಗಳ ನ್ಯಾಯಾಲಯ ಸಿಬಿಐ ತನಿಖೆಗೆ ಆದೇಶ ನೀಡಿದ್ದು, ಇದೀಗ ತನಿಖೆಯಿಂದ ತಪ್ಪಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ಮಾಡಿದ್ದಾರೆ ಎಂಬ ಅರೋಪಗಳು ಕೇಳಿ ಬಂದಿವೆ.
ಮುಡಾ ಹಗರಣದ ತನಿಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಿಬಿಐ ತನಿಖೆಯ ಸಂಕಷ್ಟ ಎದುರಾಗಿದ್ದು, ಸಿಬಿಐ ನೇರ ತನಿಖೆಯಿಂದ ಪಾರಾಗುವುದಕ್ಕೆ ಸಚಿವ ಸಂಪುಟವೇ ಅವರ ಬೆನ್ನಿಗೆ ನಿಂತಿದೆ.
ಮುಡಾ ಪ್ರಕರಣದಲ್ಲಿ ದೂರುದಾರ ಕೋರ್ಟ್ ಆದೇಶ ಪಡೆದು ನೇರವಾಗಿ ಸಿಬಿಐಗೆ ದೂರು ನೀಡಿದ್ದೆ ಆದ್ದಲ್ಲಿ ಆಗ ಮಾತ್ರ ಯಾವುದೇ ನಿಯಂತ್ರಣವಿಲ್ಲದೆ ಕೇಂದ್ರ ತನಿಖಾ ಸಂಸ್ಥೆ ತನಿಖೆ ನಡೆಸಲು ಪ್ರಾರಂಭಿಸುತ್ತದೆ. ಹೀಗಾಗಿ ರಾಜ್ಯ ಸರ್ಕಾರ ಸಿಬಿಐ ಮುಕ್ತ ತನಿಖೆಗೆ ಇರುವ ಅವಕಾಶವನ್ನು ಹಿಂಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ.
ಇನ್ನು ರಾಜ್ಯಪಾಲರು, ಮುಖ್ಯಮಂತ್ರಿ ಮತ್ತು ಸಚಿವರ ವಿರುದ್ಧ ಕೇಳಿ ಬಂದಿರುವ ಆರೋಪಗಳ ಕುರಿತು ಮುಖ್ಯ ಕಾರ್ಯದರ್ಶಿಗಳ ಹತ್ತಿರ ಮಾಹಿತಿ ಕೇಳುತ್ತಿದ್ದರು. ಈ ವಿಚಾರದಿಂದ ಸರ್ಕಾರಕ್ಕೆ ಭಾರಿ ಮುಜಗರ ಉಂಟಾಗಿತ್ತು. ಆದ ಕಾರಣ ಸಚಿವ ಸಂಪುಟದಲ್ಲಿ ರಾಜ್ಯಪಾಲರು ಕೇಳುವ ಮಾಹಿತಿಗೆ ಸಿಎಸ್ ನೀಡುವಂತಿಲ್ಲ. ಅದರ ಬದಲಿಗೆ ಮುಖ್ಯ ಕಾರ್ಯದರ್ಶಿಗಳು ಸಚಿವ ಸಂಪುಟದ ಗಮನಕ್ಕೆ ತಂದು ಆ ನಂತರ ರಾಜ್ಯಪಾಲರಿಗೆ ಕ್ಯಾಬಿನೆಟ್ ಮುಖಾಂತರವೇ ಉತ್ತರ ಹೋಗಬೇಕು ಎಂದು ನಿರ್ಣಯ ಕೈಕೊಳ್ಳಲಾಗಿದೆ. ಅಲ್ಲದೇ ಮುಡಾ ಪ್ರಕರಣದಲ್ಲಿ ಸಿಬಿಐ ಮುಕ್ತ ತನಿಖಾ ಅವಕಾಶಕ್ಕೆ ತಡೆಯಾಗುವ ಮೂಲಕ ಸರ್ಕಾರದ ವಿರುದ್ಧ ಪತ್ರ ಸಮರ ಆರಂಭ ಮಾಡಿದ್ದ ರಾಜ್ಯಪಾಲರಿಗೂ ತಿರುಗೇಟು ನೀಡುವಂತೆ ಮಾಡಲು ಸಚಿವ ಸಂಪುಟ ನಿರ್ಧರಿಸಿದೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…