ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಲು ಅನುಮತಿ ಸಿಗದ ಕಾರಣ ಸಿಎಂ ಸಿದ್ದರಾಮಯ್ಯ ಬೀಸೋ ದೊಣ್ಣೆಯಿಂದ ಪಾರಾಗಿದ್ದಾರೆ.
ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಆಗಸ್ಟ್.29ರವರೆಗೆ ಯಾವುದೇ ಆದೇಶ ನೀಡದಂತೆ ಜನಪ್ರತಿನಿಧಿಗಳ ಕೋರ್ಟ್ಗೆ ಸೂಚನೆ ನೀಡಿದೆ.
ಎಫ್ಐಆರ್ ದಾಖಲಾಗುವ ಭಯದಲ್ಲಿದ್ದ ಸಿಎಂಗೆ ಹೈಕೋರ್ಟ್ನಿಂದ ರಿಲೀಫ್ ಸಿಕ್ಕಿದೆ. ಕೆಳಹಂತದ ನ್ಯಾಯಾಲಯ ವಿಚಾರಣೆಗೆ ಅಸ್ತು ಎಂದಿದ್ದರೆ ಸಿಎಂ ಮೇಲೆ ಪಿಸಿಆರ್ ದಾಖಲಾಗುತ್ತಿತ್ತು. ಮೈಸೂರು ಲೋಕಾಯುಕ್ತದಲ್ಲಿ ಸಿಎಂ ಹಾಗೂ ಕುಟುಂಬದ ವಿರುದ್ಧ ಎಫ್ಐಆರ್ ದಾಖಲಾಗುತ್ತಿತ್ತು. ಆದರೆ ಇದೀಗ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
10 ದಿನಗಳವರೆಗೆ ವಿಚಾರಣಾ ನ್ಯಾಯಾಲಯ ಯಾವುದೇ ಆದೇಶ ಹಾಗೂ ತೀರ್ಮಾನ ಪ್ರಕಟಿಸುವಂತಿಲ್ಲ ಎಂದು ಹೈಕೋರ್ಟ್ ಸೂಚಿಸಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಸದ್ಯ ಸೇಫ್ ಆಗಿದ್ದು, ಮುಂದಿನ ಆದೇಶದ ದಿನದವರೆಗೂ ಆರಾಮಾಗಿ ಇರಲಿದ್ದಾರೆ.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…