ಬೆಂಗಳೂರು: ಆರೋಪಕ್ಕೆ ಉತ್ತರಿಸುವ ಬದಲಾಗಿ ಸಿಎಂ ಸಿದ್ದರಾಮಯ್ಯ ಬ್ಲ್ಯಾಕ್ಮೇಲೆ ಪಾಲಿಟಿಕ್ಸ್ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಕಿಡಿಕಾರಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿದ್ದಾಗ ಬಿಜೆಪಿ ಸರ್ಕಾರದ ವಿರುದ್ಧ 40% ಸರ್ಕಾರ ಎಂದು ಆರೋಪ ಮಾಡಿದ್ದರು. ಆದರೆ ಅವರ ಸರ್ಕಾರ ಬಂದು ಇನ್ನೇನು ಒಂದೂವರೆ ವರ್ಷ ಆಗಿದೆ. ನಮ್ಮ ನಾಯಕರ ಮೇಲೆ ಯಾಕೆ ಎಫ್ಐಆರ್ ಹಾಕಿಲ್ಲ ಎಂದು ಪ್ರಶ್ನೆ ಮಾಡಿದರು.
ಸಿದ್ದರಾಮಯ್ಯ ಮಾತು ಮಾತಿಗೂ ಬರೀ ಸುಳ್ಳನೇ ಹೇಳುತ್ತಿದ್ದಾರೆ. ಜನರಲ್ಲಿ ಗೊಂದಲ ಮೂಡಿಸಲು ಇನ್ನೊಬ್ಬರ ಕಡೆ ಬೆಟ್ಟು ಮಾಡಿ ತೋರಿಸುತ್ತಿದ್ದಾರೆ. ತಮ್ಮ ಮೇಲಿನ ಆರೋಪಕ್ಕೆ ಉತ್ತರಿಸುವ ಬದಲಾಗಿ ಸಿದ್ದರಾಮಯ್ಯ ಬ್ಲ್ಯಾಕ್ಮೇಲ್ ಪಾಲಿಟಿಕ್ಸ್ ಶುರು ಮಾಡಿದ್ದಾರೆ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ನಡೆಯುತ್ತಿರುವ ಹಗರಣಗಳಿಂದ ಸಿಎಂ ಸಿದ್ದರಾಮಯ್ಯ ಹತಾಶರಾಗಿದ್ದಾರೆ. ಅದಕ್ಕೆ ನಮ್ಮ ನಾಯಕರ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಡುವವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಕಿಡಿಕಾರಿದರು.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…