ಬೆಂಗಳೂರು: ಮುಡಾ ಅಕ್ರಮ ಆರೋಪದ ತನಿಖೆಯನ್ನು ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಮಡಾ ಅಕ್ರಮದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂಬ ಬಿಜೆಪಿ ಆಗ್ರಹದ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ವಿರೋಧ ಪಕ್ಷದವರು ಕೇಳುತ್ತಾರೆ ಎಂದು ಎಲ್ಲವನ್ನೂ ಸಿಬಿಐಗೆ ಕೊಡಲು ಆಗಲ್ಲ ಎಂದರು.
ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಆರೋಪದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಎಲ್ಲವನ್ನೂ ಸಿಬಿಐ ತನಿಖೆಗೆ ಕೊಟ್ಟರೆ ಇಲ್ಲೇನು ಮಾಡುವ ಹಾಗಿಲ್ಲವೇ ಎಂದು ಪ್ರಶ್ನೆ ಮಾಡಿದರು. ಇದು ಸಿಬಿಐಗೆ ಕೊಡುವ ಪ್ರಕರಣವಲ್ಲ. ಪ್ರಕರಣದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಾನೂನು ರೀತಿಯಲ್ಲಿ ಶಿಕ್ಷೆಯಾಗುತ್ತದೆ ಎಂದರು.
ಸದನದಲ್ಲಿ ಯಾವ ವಿಷಯ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ. ಸ್ಪೀಕರ್ಗೆ ಯಾವ ವಿಚಾರದ ಬಗ್ಗೆ ಪತ್ರ ಕೊಡ್ತಾರೋ ನೋಡೋಣ. ಬಿಜೆಪಿಯವರಿಗೆ ನಾವು ಉತ್ತರ ಕೊಡುತ್ತೇವೆ. ಯಾವುದೇ ಕಾರಣಕ್ಕೆ ಉತ್ತರ ಕೊಡಲು ಹಿಂಜರಿಯುವುದಿಲ್ಲ ಎಂದರು.
ಪಶ್ಚಿಮ ಏಷ್ಯಾದಲ್ಲಿ ಅಮೆರಿಕ- ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ವಲ್ಪ ಮಟ್ಟಿಗೆ ವಾಣಿಜ್ಯ ಸಿಲಿಂಡರ್ ಅಭಾವ…
ಇರಾನ್-ಅಮೆರಿಕ-ಇಸ್ರೇಲ್ ಯುದ್ಧವು ೩೭ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಏರಿಕೆಗಳು ಕಣ್ಣೀರು ತರಿಸುತ್ತಿದೆ. ಎಲ್ಪಿಜಿ ಗ್ಯಾಸ್…
ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಶುರುವಾಗಿ ತಿಂಗಳೇ ಕಳೆದರೂ ನಿಲ್ಲುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಯುದ್ಧದ ಭೀಕರತೆ ದಿನೇ…
ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…
ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…
ಭೇರ್ಯ ಮಹೇಶ್ ಇಂದು ಭೇರ್ಯದಲ್ಲಿ ಕರಿಯಮ್ಮ ದೊಡ್ಡಮ್ಮ ದೇವಿ ಸಿಡಿ ಉತ್ಸವ, ನಾಳೆ ಜಾತ್ರಾ ಮಹೋತ್ಸವ ಭೇರ್ಯ: ಭೇರ್ಯ ಗ್ರಾಮದ…