ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಡಾ ಹಗರಣ ಆಗಿಯೇ ಇಲ್ಲ ಎಂದವರು ಈ ಹಿಂದಿನ ಆಯುಕ್ತರನ್ನು ಯಾಕೆ ಅಮಾನತು ಮಾಡಿದ್ರಿ?. ಇದರಿಂದ ಮುಡಾದಲ್ಲಿ ಹಗರಣ ಆಗಿರುವುದು ಗೊತ್ತಾಗುತ್ತದೆ ಎಂದು ಸಿಎಂ ಸಿದ್ದು ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯ ಸರ್ಕಾರ ಕೇವಲ ಒಂದು ವರ್ಷದಲ್ಲೇ ಅನೇಕ ಹಗರಣಗಳಲ್ಲಿ ಸಿಕ್ಕಿಹಾಕಿಕೊಂಡಿದೆ. ಸಿಎಂ ಸಿದ್ದರಾಮಯ್ಯ ಹಗರಣಗಳಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಇದು ನಾಚಿಕೆಗೇಡು. ಮುಡಾದಲ್ಲಿ ದೊಡ್ಡ ಅಕ್ರಮ ಆಗಿರುವುದು ಸಾಬೀತಾಗಿದೆ. ಈಗ ಮುಡಾ ಅಧಿಕಾರಿಯನ್ನು ಅಮಾನತು ಮಾಡಿದ್ದಾರೆ ಎಂದು ಕಿಡಿಕಾರಿದರು.
50:50 ಅನುಪಾತವೇ ಅಕ್ರಮ ಆಗಿದೆ ಎಂದು ಅಮಾನತು ಮಾಡಿದ್ದಾರೆ. ಇದಕ್ಕಿಂತ ಸಾಕ್ಷಿ ಬೇಕಾ? ಇದೆಲ್ಲಾ ನಡೆದಿದ್ದರೂ ಪದೇ ಪದೇ ರಾಜ್ಯಪಾಲರ ವಿರುದ್ಧ ಮಾತನಾಡುತ್ತಿದ್ದಾರೆ. ಕೋರ್ಟ್ ಸಹ ಎಲ್ಲವನ್ನೂ ನೋಡುತ್ತಿದೆ. ಕೋರ್ಟ್ ಜನರ ಹಣ ಉಳಿಸೋ ಕೆಲಸ ಮಾಡುವ ವಿಶ್ವಾಸವಿದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಮಾಜಿ ಸಿಎಂ ರಾಮಕೃಷ್ಣ ಹೆಗಡೆಯವರ ಮೇಲೆ ಆರೋಪ ಬಂದಾಗ ಅವರು ರಾಜೀನಾಮೆ ಕೊಟ್ಟಿದ್ದರು. ಅದೇ ರೀತಿ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ಆಗ್ರಹಿಸಿದರು.
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…
ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…
ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…
ಬೆಂಗಳೂರಿನ ನಾಗರಿಕರಿಗೆ ಸುರಕ್ಷಿತವಾಗಿ ಪಾದಚಾರಿ ಮಾರ್ಗದಲ್ಲಿ ನಡೆಯುವ ಹಕ್ಕಿದೆ.ಪಾದಚಾರಿ ಮಾರ್ಗಗಳ ಒತ್ತುವರಿ ಎಂದರೆ ನಾಗರಿಕರ ಸುರಕ್ಷತೆ ಕಸಿದುಕೊಂಡಂತೆ. ಇದು ಕೇವಲ…