ರಾಜ್ಯ

ಮೈಸೂರು ಮುಡಾ ಹಗರಣ: ಇಂದು ಸಿಎಂ ಅರ್ಜಿ ಮತ್ತೆ ವಿಚಾರಣೆ

ಬೆಂಗಳೂರು: ಮೈಸೂರು ಮುಡಾ ಕೇಸ್‌ನಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್‌ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಲಿದೆ.

ರಾಜ್ಯ ಸರ್ಕಾರದ ಪರ ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ವಾದ ಮಂಡಿಸಲಿದ್ದಾರೆ. ಇದಲ್ಲದೇ ಸೆಪ್ಟೆಂಬರ್‌ 12ರಂದು ವಾರದ ಸರಣಿ ಮುಂದುವರಿಯಲಿದೆ. ಅಂದು ಸಿಎಂ ಪರ ಅಭಿಷೇಕ್‌ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಹೈಕೋರ್ಟ್‌ ಆದೇಶ ನೀಡುವ ಎಲ್ಲಾ ಸಾಧ್ಯತೆ ಕಡಿಮೆಯಿದೆ ಎನ್ನಲಾಗಿದೆ.

ಇನ್ನು ರಾಜ್ಯಪಾಲರ ಆದೇಶ ವಜಾಗೊಳಿಸಬೇಕು ಎಂದು ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ಇದೇ ಸೆಪ್ಟೆಂಬರ್‌ 2ರಂದು ವಿಚಾರಣೆ ನಡೆಸಿದ್ದ ಕೋರ್ಟ್‌ 2ನೇ ಬಾರಿಗೆ ಮುಂದೂಡಿಕೆ ಮಾಡಿತ್ತು.

ಗಣೇಶ ಹಬ್ಬದ ಬಳಿಕ ಅಂದರೆ ಇಂದು ಮಧ್ಯಾಹ್ನ 2.30ಕ್ಕೆ ಹೈಕೋರ್ಟ್ ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಪೌರ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ

ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…

4 hours ago

ಓದುಗರ ಪತ್ರ: ಪರೀಕ್ಷೆ ವೇಳೆ ಆರೋಗ್ಯ ಏರುಪೇರಾದರೆ ಬದಲಿ ವ್ಯವಸ್ಥೆ ಕಲ್ಪಿಸಿ

ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…

4 hours ago

ಓದುಗರ ಪತ್ರ: ಅಂಚೆ ಕಚೇರಿ ಚಲನ್‌ಗಳು ಕನ್ನಡದಲ್ಲಿರಲಿ

ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರ ಸವಾರಿಗೆ ಬೇಕಿದೆ ಕಡಿವಾಣ

ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…

4 hours ago

ಮೂಗಿನ ನೇರಕ್ಕೆ ಇತಿಹಾಸವನ್ನು ತಿರುಚುವುದಿದೆಯಲ್ಲಾ….

‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…

4 hours ago

ಸಂವಿಧಾನ ನಮ್ಮ ಬಳಿ ಇದೆ, ಆದರೆ ಅದರ ಧ್ವನಿ ಎಲ್ಲಿದೆ?

ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…

4 hours ago