ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಗೋಲ್ಮಾಲ್ ಸಿಎಂ 4000 ಕೋಟಿ ಗುಳುಂ ಎಂದು ಟ್ವೀಟ್ ಮಾಡಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನು ಗುಳುಂ ಮಾಡಿರುವ ಸಿದ್ಧಹಸ್ತರು ಈಗ ಮೈಸೂರಿನ ಮುಡಾದಲ್ಲಿ 4000 ಕೋಟಿ ರೂಪಾಯಿ ಗುಳುಂ ಮಾಡುವ ಮೂಲಕ ಮತ್ತೊಮ್ಮೆ ತಮ್ಮ ಕೈಚಳಕ ಪ್ರದರ್ಶನ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.
ಗೋಲ್ಮಾಲ್ ಸಿಎಂ ಸಿದ್ದರಾಮಯ್ಯನವರೇ, ತಮ್ಮ ಧರ್ಮಪತ್ನಿ ಅವರ ಹೆಸರಿನಲ್ಲೂ ನಿಯಮ ಬಾಹಿರವಾಗಿ ನಿವೇಶನ ವರ್ಗಾವಣೆ ಆಗಿರುವ ಸುದ್ದಿ ಹೊರಬಂದಿದೆಯಲ್ಲ ಇದನ್ನು ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ.? ಆರೋಪ ಕೇಳಿಬಂದಿರುವ ಮುಡಾ ಅಧಿಕಾರಿಗಳನ್ನು ಅಮಾನತು ಮಾಡದೇ, ಕೇವಲ ವರ್ಗಾವಣೆ ಮಾಡಿ ಕೈತೊಳೆದುಕೊಂಡಿದ್ದೀರಲ್ಲ, ಯಾರನ್ನು ರಕ್ಷಣೆ ಮಾಡಲು ಹೊರಟ್ಟಿದ್ದೀರಿ ಎಂದು ಸಿದ್ದರಾಮಯ್ಯರಿಗೆ ಪ್ರಶ್ನಿಸಿದ್ದಾರೆ.
ಸಚಿವ ಸಂಪುಟದ ಅನುಮತಿ ಪಡೆಯದೇ ಮನಸ್ಸಿಗೆ ಬಂದಂತೆ ನಿವೇಶನ ನೀಡಲು ಅನುಮತಿ ನೀಡಿದ್ದು ಯಾರು.? ನಿಮ್ಮ ತವರು ಜಿಲ್ಲೆಯಲ್ಲಿ ಸ್ವಂತ ಊರಿನಲ್ಲಿ ತಮ್ಮ ಆಪ್ತ ಸಚಿವರ ಇಲಾಖೆಯಲ್ಲಿ ಇಂಥದ್ದೊಂದು ಬೃಹತ್ ಹಗರಣ ತಮ್ಮ ಗಮನಕ್ಕೆ ಬಾರದೇ, ತಮ್ಮ ಕೈವಾಡವಿಲ್ಲದೇ ನಡೆಯಲು ಸಾಧ್ಯವೇ ಎಂದು ಅಶೋಕ್ ಪ್ರಶ್ನಿಸಿದ್ದಾರೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…