ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಗೋಲ್ಮಾಲ್ ಸಿಎಂ 4000 ಕೋಟಿ ಗುಳುಂ ಎಂದು ಟ್ವೀಟ್ ಮಾಡಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನು ಗುಳುಂ ಮಾಡಿರುವ ಸಿದ್ಧಹಸ್ತರು ಈಗ ಮೈಸೂರಿನ ಮುಡಾದಲ್ಲಿ 4000 ಕೋಟಿ ರೂಪಾಯಿ ಗುಳುಂ ಮಾಡುವ ಮೂಲಕ ಮತ್ತೊಮ್ಮೆ ತಮ್ಮ ಕೈಚಳಕ ಪ್ರದರ್ಶನ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.
ಗೋಲ್ಮಾಲ್ ಸಿಎಂ ಸಿದ್ದರಾಮಯ್ಯನವರೇ, ತಮ್ಮ ಧರ್ಮಪತ್ನಿ ಅವರ ಹೆಸರಿನಲ್ಲೂ ನಿಯಮ ಬಾಹಿರವಾಗಿ ನಿವೇಶನ ವರ್ಗಾವಣೆ ಆಗಿರುವ ಸುದ್ದಿ ಹೊರಬಂದಿದೆಯಲ್ಲ ಇದನ್ನು ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ.? ಆರೋಪ ಕೇಳಿಬಂದಿರುವ ಮುಡಾ ಅಧಿಕಾರಿಗಳನ್ನು ಅಮಾನತು ಮಾಡದೇ, ಕೇವಲ ವರ್ಗಾವಣೆ ಮಾಡಿ ಕೈತೊಳೆದುಕೊಂಡಿದ್ದೀರಲ್ಲ, ಯಾರನ್ನು ರಕ್ಷಣೆ ಮಾಡಲು ಹೊರಟ್ಟಿದ್ದೀರಿ ಎಂದು ಸಿದ್ದರಾಮಯ್ಯರಿಗೆ ಪ್ರಶ್ನಿಸಿದ್ದಾರೆ.
ಸಚಿವ ಸಂಪುಟದ ಅನುಮತಿ ಪಡೆಯದೇ ಮನಸ್ಸಿಗೆ ಬಂದಂತೆ ನಿವೇಶನ ನೀಡಲು ಅನುಮತಿ ನೀಡಿದ್ದು ಯಾರು.? ನಿಮ್ಮ ತವರು ಜಿಲ್ಲೆಯಲ್ಲಿ ಸ್ವಂತ ಊರಿನಲ್ಲಿ ತಮ್ಮ ಆಪ್ತ ಸಚಿವರ ಇಲಾಖೆಯಲ್ಲಿ ಇಂಥದ್ದೊಂದು ಬೃಹತ್ ಹಗರಣ ತಮ್ಮ ಗಮನಕ್ಕೆ ಬಾರದೇ, ತಮ್ಮ ಕೈವಾಡವಿಲ್ಲದೇ ನಡೆಯಲು ಸಾಧ್ಯವೇ ಎಂದು ಅಶೋಕ್ ಪ್ರಶ್ನಿಸಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…