Mysore
28
clear sky

Social Media

ಗುರುವಾರ, 12 ಫೆಬ್ರವರಿ 2026
Light
Dark

ಮೈಸೂರು ಮುಡಾ ಹಗರಣ: ಇಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಆದೇಶ ಹೊರಡಿಸಲಿದೆ.

ಲೋಕಾಯುಕ್ತ ಸಲ್ಲಿಸಿರುವ ಬಿ-ರಿಪೋರ್ಟ್‌ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್‌ ಮೆಟ್ಟಿಲೇರಿದ್ದರು. ವಾದ ಆಲಿಸಿದ್ದ ನ್ಯಾಯಾಲಯ ಇಂದಿಗೆ ಆದೇಶ ಕಾಯ್ದಿರಿಸಿತ್ತು. ನ್ಯಾಯಾಲಯ ಬಿ ರಿಪೋರ್ಟ್‌ ಒಪ್ಪಿದರೆ ಸಿಎಂ ಕುಟುಂಬಕ್ಕೆ ಬಿಗ್‌ ರಿಲೀಫ್‌ ಸಿಗಲಿದೆ. ಒಪ್ಪದೇ ಇದ್ದರೆ ದೊಡ್ಡ ಸಂಕಷ್ಟ ಎದುರಾಗಲಿದೆ.

Tags:
error: Content is protected !!