ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್ಚಿಟ್ ಕುರಿತು ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಆದೇಶ ಹೊರಡಿಸಲಿದೆ.
ಲೋಕಾಯುಕ್ತ ಸಲ್ಲಿಸಿರುವ ಬಿ-ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್ ಮೆಟ್ಟಿಲೇರಿದ್ದರು. ವಾದ ಆಲಿಸಿದ್ದ ನ್ಯಾಯಾಲಯ ಇಂದಿಗೆ ಆದೇಶ ಕಾಯ್ದಿರಿಸಿತ್ತು. ನ್ಯಾಯಾಲಯ ಬಿ ರಿಪೋರ್ಟ್ ಒಪ್ಪಿದರೆ ಸಿಎಂ ಕುಟುಂಬಕ್ಕೆ ಬಿಗ್ ರಿಲೀಫ್ ಸಿಗಲಿದೆ. ಒಪ್ಪದೇ ಇದ್ದರೆ ದೊಡ್ಡ ಸಂಕಷ್ಟ ಎದುರಾಗಲಿದೆ.





