ಬೆಂಗಳೂರು: ಮೈಸೂರು ಮುಡಾದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಮುಂದಿನ ನಡೆ ತೀವ್ರ ಕುತೂಹಲ ಮೂಡಿಸಿದೆ.
ನಿನ್ನೆ ತಾನೇ ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಇನ್ನು ಮುಂದೆ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಲಿ ಆಟ ಆರಂಭಿಸುತ್ತಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಶೋಕಾಸ್ ನೋಟಿಸ್ ಮುಂದಿನ ಪ್ರಕ್ರಿಯೆ ಹೇಗಿರಲಿದೆ ಎಂಬುದು ಎಲ್ಲರ ಪ್ರಶ್ನೆಯಾಗಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡುವ ಎಲ್ಲಾ ಸಾಧ್ಯತೆಗಳು ಎದ್ದು ಕಾಣಿಸುತ್ತಿವೆ ಎನ್ನಲಾಗುತ್ತಿದೆ.
ಇನ್ನು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಿದರೆ ಸರ್ಕಾರ ಹಾಗೂ ರಾಜಭವನದ ನಡುವೆ ರಾಜಕೀಯ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎನ್ನಲಾಗುತ್ತಿದೆ.
ದೆಹಲಿಯಲ್ಲಿ ಸಂಸತ್ ಅಧಿವೇಶನ ನಡೆಯುತ್ತಿದ್ದು, ಆಗಸ್ಟ್.12ರಂದು ಅದು ಮುಕ್ತಾಯಗೊಳ್ಳಲಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿಸಿದರೆ, ಸದನದಲ್ಲಿ ಪ್ರತಿಪಕ್ಷಗಳು ಕೋಲಾಹಲ ಎಬ್ಬಿಸುವುದು ಗ್ಯಾರಂಟಿ ಎನ್ನಲಾಗುತ್ತಿದೆ. ಹೀಗಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಆಗಸ್ಟ್.12ರ ಬಳಿಕ ತಮ್ಮ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಈ ಮೂಲಕ ಸಿಎಂ ಸಿದ್ದರಾಮಯ್ಯರ ಭವಿಷ್ಯ ರಾಜ್ಯಪಾಲರ ಅಂಗಳದಲ್ಲಿ ನಿಂತಿದ್ದು, ಮುಡಾ ಪ್ರಕರಣದಿಂದ ಸರ್ಕಾರಕ್ಕೆ ಭಾರೀ ಮುಜುಗರ ಆಗಿದೆ ಎನ್ನಲಾಗುತ್ತಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…