ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಆರೋಪ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಂಎಲ್ಸಿ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಬಟ್ಟೆ ಮಾತ್ರ ಪರಿಶುದ್ಧವಾಗಿದ್ದರೆ ಸಾಕಾ ಎಂದು ಪ್ರಶ್ನಿಸಿದ್ದಾರೆ. ಭೂಮಿ ವಶಪಡಿಸಿಕೊಳ್ಳಬೇಕಾದರೆ 50:50 ನಿವೇಶನ ಕೊಡಬೇಕಾಗುತ್ತದೆ. ಸರ್ಕಾರಕ್ಕೆ ಮೋಸ ಮಾಡಬೇಕೆಂದೇ ವ್ಯವಸ್ಥಿತವಾಗಿ ಮಾಡಿದ್ದಾರೆ ಎಂದು ಟೀಕಿಸಿದರು.
ಮೋಸ ಮಾಡಿರುವವರು ಸಿಎಂ ಸಿದ್ದರಾಮಯ್ಯಗೆ ಹತ್ತಿರವಾಗಿರುವವರು. ಅದಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಸಿಎಂ ತವರು ಜಿಲ್ಲೆಯಲ್ಲಿಯೇ ಸಾವಿರಾರು ಕೋಟಿ ಅಕ್ರಮ ಆಗಿದೆ. ಸಿಎಂ ಸಿದ್ದರಾಮಯ್ಯನವರು ತಮ್ಮ ಪರಿಶುದ್ಧತೆಯನ್ನು ಸಾಬೀತುಪಡಿಸಲು ರಾಜೀನಾಮೆ ಕೊಡಬೇಕು ಎಂದ ಸಿ.ಟಿ.ರವಿ ಅವರು, ದಾಖಲೆ ಇಟ್ಟು ಭ್ರಷ್ಟಾಚಾರವನ್ನು ಜನರ ಮುಂದೆಯೇ ಬಯಲಿಗೆಳೆಯುತ್ತೇವೆ. ಭ್ರಷ್ಟಾಚಾರ ಯಾರ ಅವಧಿಯಲ್ಲಿ ಆಗಿದ್ದರೂ ಕ್ರಮ ಕೈಗೊಳ್ಳಿ. ಬಿಜೆಪಿ ಕಾಲದಲ್ಲಿ ಆಗಿದ್ದರೂ ಕ್ರಮ ತೆಗೆದುಕೊಳ್ಳಿ ಎಂದು ಆಗ್ರಹಿಸಿದರು.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…