ಬೆಂಗಳೂರು: ಮೈಸೂರು ಮುಡಾದಲ್ಲಿ ಭಾರೀ ಅಕ್ರಮ ನಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ನಟೇಶ್ ಅವರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಮೈಸೂರು ಮುಡಾ ಹಗರಣ ದಿನದಿಂದ ದಿನಕ್ಕೆ ತೀವ್ರ ಕಾವು ಪಡೆದುಕೊಳ್ಳುತ್ತಿದ್ದು, ರಾಜ್ಯದಲ್ಲಿ ಮತ್ತಷ್ಟು ಚರ್ಚಾ ವಿಷಯವಾಗಿ ಹೊರಹೊಮ್ಮಿದೆ.
ಈಗ ಮಾಜಿ ಮುಡಾ ಆಯುಕ್ತ ನಟೇಶ್ರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಕಚೇರಿಗೆ ಕರೆದೊಯ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಟೇಶ್ ಅವರು ವಿಚಾರಣೆಗೆ ಸಹಕರಿಸದ ಹಿನ್ನೆಲೆಯಲ್ಲಿ ಕಚೇರಿಗೆ ಕರೆದೊಯ್ದಿದ್ದು, ನಟೇಶ್ರನ್ನು ಬಂಧಿಸುವ ಸಾಧ್ಯತೆಯಿದೆ.
ಇನ್ನು ನಟೇಶ್ ಮನೆ ಮೇಲೆ ನಿನ್ನೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಮನೆಯಲ್ಲಿ ಹಲವು ದಾಖಲಾತಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದ್ದು, ತನಿಖೆಗೆ ನಟೇಶ್ ಸಹಕರಿಸಿಲ್ಲ ಎನ್ನಲಾಗಿದೆ.
ಆದ್ದರಿಂದ ಇಂದು ನಟೇಶ್ರನ್ನು ವಶಕ್ಕೆ ಪಡೆದುಕೊಂಡು ಬಂಧಿಸುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…
ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್…
ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್ ಪವಾರ್ ಪತ್ನಿ ಸುನೇಂದ್ರ ಪವಾರ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ…
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ 9ನೇ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಮೂಲಕ…
ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್ ಗ್ರೂಪ್ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…