ಬೆಂಗಳೂರು: ಮೈಸೂರು ಮುಡಾದಲ್ಲಿ ಭಾರೀ ಅಕ್ರಮ ನಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ನಟೇಶ್ ಅವರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಮೈಸೂರು ಮುಡಾ ಹಗರಣ ದಿನದಿಂದ ದಿನಕ್ಕೆ ತೀವ್ರ ಕಾವು ಪಡೆದುಕೊಳ್ಳುತ್ತಿದ್ದು, ರಾಜ್ಯದಲ್ಲಿ ಮತ್ತಷ್ಟು ಚರ್ಚಾ ವಿಷಯವಾಗಿ ಹೊರಹೊಮ್ಮಿದೆ.
ಈಗ ಮಾಜಿ ಮುಡಾ ಆಯುಕ್ತ ನಟೇಶ್ರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಕಚೇರಿಗೆ ಕರೆದೊಯ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಟೇಶ್ ಅವರು ವಿಚಾರಣೆಗೆ ಸಹಕರಿಸದ ಹಿನ್ನೆಲೆಯಲ್ಲಿ ಕಚೇರಿಗೆ ಕರೆದೊಯ್ದಿದ್ದು, ನಟೇಶ್ರನ್ನು ಬಂಧಿಸುವ ಸಾಧ್ಯತೆಯಿದೆ.
ಇನ್ನು ನಟೇಶ್ ಮನೆ ಮೇಲೆ ನಿನ್ನೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಮನೆಯಲ್ಲಿ ಹಲವು ದಾಖಲಾತಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದ್ದು, ತನಿಖೆಗೆ ನಟೇಶ್ ಸಹಕರಿಸಿಲ್ಲ ಎನ್ನಲಾಗಿದೆ.
ಆದ್ದರಿಂದ ಇಂದು ನಟೇಶ್ರನ್ನು ವಶಕ್ಕೆ ಪಡೆದುಕೊಂಡು ಬಂಧಿಸುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…