ಬೆಂಗಳೂರು: ಲೋಕಾಯುಕ್ತ ಪೊಲೀಸರು ಬಿ.ರೀಪೋರ್ಟ್ ಸಲ್ಲಿಕೆ ಮಾಡಿದ್ದರಿಂದ ತೀವ್ರ ಬೇಸರ ವ್ಯಕ್ತಪಡಿಸಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ತೊಡೆ ತಟ್ಟಿದ್ದಾರೆ.
ಮೈಸೂರು ಮುಡಾದಿಂದ ಪರಿಹಾರ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಅವರ ಸೋದರ ಮಾವ ಮತ್ತು ಮತ್ತೋರ್ವ ವ್ಯಕ್ತಿಯ ವಿರುದ್ಧ ದಾಖಲಾದ ಪ್ರಕರಣವನ್ನು ವೈಯಕ್ತಿಕವಾಗಿ ವಾದಿಸಲು ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.
ತನಿಖೆಯ ಬಗ್ಗೆ ಅಗತ್ಯ ದಾಖಲೆಗಳನ್ನು ಮತ್ತು ಅಂತಿಮ ವರದಿಯನ್ನು ಮಾರ್ಚ್.1, 2025ರೊಳಗೆ ಕೃಷ್ಣ ಅವರಿಗೆ ಸಲ್ಲಿಸುವಂತೆ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿದೆ.
ಈ ಹಿನ್ನೆಲೆಯಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣ ಅವರು ಖುದ್ದು ತಾವೇ ವಾದ ಮಂಡಿಸಲಿದ್ದು, ಈ ಪ್ರಕರಣ ಮತ್ತಷ್ಟು ತಿರುವು ಪಡೆದುಕೊಳ್ಳಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸ್ನೇಹಮಯಿ ಕೃಷ್ಣ ವಾದ ಮಂಡನೆ ಮಾಡಲಿರುವ ಹಿನ್ನೆಲೆಯಲ್ಲಿ ಮುಡಾ ಹಗರಣ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ತಲೆನೋವಾಗಿ ಪರಿಣಮಿಸಲಿದೆ ಎನ್ನಲಾಗುತ್ತಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…