ರಾಜ್ಯ

ಮೈಸೂರು ಮುಡಾ ಹಗರಣ: ಮತ್ತೊಂದು ಗಂಭೀರ ಆರೋಪ ಮಾಡಿದ ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಹಗರಣದ ಪ್ರಮುಖ ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.

ನನ್ನ ಹೋರಾಟ ನಿಲ್ಲಿಸಲು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಅವರ ಆಪ್ತರು ಆಮಿಷವೊಡ್ಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಕಳೆದ ಮೂರು ದಿನಗಳಿಂದ ಎಲ್ಲಿಯೂ ಕಾಣಿಸಿಕೊಳ್ಳದ ಸ್ನೇಹಮಯಿ ಕೃಷ್ಣ ಇದೀಗ ಮತ್ತೆ ಪ್ರತ್ಯಕ್ಷರಾಗಿದ್ದು, ಹೋರಾಟ ಹತ್ತಿಕ್ಕಲು ನನ್ನ ವಿರುದ್ಧ ಸುಳ್ಳು ಕೇಸ್ ದಾಖಲಿಸಲಾಗಿದೆ ಎಂದು ಕಿಡಿಕಾರಿದ್ದಾರೆ.

ಪ್ರಕರಣದ ಬಗ್ಗೆ ಕೂಲಂಕುಷವಾಗಿ ಮಾಹಿತಿ ನೀಡಿರುವ ಸ್ನೇಹಮಯಿ ಕೃಷ್ಣ ಅವರು, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಆಪ್ತ ಸಹಾಯಕ ಎಂದು ಹೇಳಿಕೊಂಡು ಡಿಸೆಂಬರ್.‌13ರಂದು ಮುಡಾ ಬಳಿ ನನ್ನನ್ನು ಭೇಟಿ ಮಾಡಿದ್ದರು.

ಪಾರ್ವತಮ್ಮ ಮಾನಸಿಕವಾಗಿ ನೊಂದಿದ್ದಾರೆ. ಪ್ರಕರಣ ಸಿಬಿಐಗೆ ಕೊಡಿ ಎಂಬ ಅರ್ಜಿ ವಾಪಸ್‌ ಪಡೆಯಿರಿ. ಲೋಕಾಯುಕ್ತದಿಂದ ನಮಗೇನೂ ಸಮಸ್ಯೆಯಿಲ್ಲ. ನಿಮಗೆ ಕೇಳಿದಷ್ಟು ಹಣ ಕೊಡುತ್ತೇನೆ ಎಂದು ಹೇಳಿದ್ದಾನೆ ಎಂದರು.

ಆದರೆ ಇದಕ್ಕೆಲ್ಲಾ ನಾನು ಒಪ್ಪಲಿಲ್ಲ. ಆದರೆ ಸಿಬಿಐ ತನಿಖೆ ಬೇಡ ಎಂದು ಆಮಿಷವೊಡ್ಡಿದ್ದ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡುತ್ತೇನೆ ಎಂದು ತಿಳಿಸಿದ್ದಾರೆ. ನನಗೆ ಹಣದ ಆಮಿಷವೊಡ್ಡಿರುವ ಬಗ್ಗೆಯೂ ದೂರಿನಲ್ಲಿ ಉಲ್ಲೇಖ ಮಾಡುವುದಾಗಿಯೂ ತಿಳಿಸಿದ್ದಾರೆ.

ಇನ್ನು ಮುಂದುವರಿದು ಮಾತನಾಡಿದ ಅವರು, ಮುಡಾ ಹಗರಣದ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇನೆ ಎಂದು ಸಿಎಂ ಕುಟುಂಬದ ವಿರುದ್ಧ ಕಿಡಿಕಾರಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಂಡೀಪುರದಲ್ಲಿ ಏಪ್ರಿಲ್.1ರಿಂದ ಅರಣ್ಯ ಸಿಬ್ಬಂದಿ ಮುಷ್ಕರ: ಕಾರಣ ಇಷ್ಟೇ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್.‌1ರಿಂದ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕುರಿತು ದಿನಗೂಲಿ…

1 hour ago

ಸಂಸದ ಯದುವೀರ್ ಒಡೆಯರ್ ಹುಟ್ಟುಹಬ್ಬದಂದು ‘ರಂಗೋಲಿ’ ಶುಭಾಶಯ

ಮೈಸೂರು: ಇಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿ ಸಂಭ್ರಮ ಮನೆಮಾಡಿದೆ. ಅರಮನೆಯ…

2 hours ago

ಮಾರ್ಚ್.‌28ರಂದು ಐಪಿಎಲ್‌ ಉದ್ಘಾಟನಾ ಪಂದ್ಯ: ಆನ್‌ಲೈನ್‌ನಲ್ಲಿ ಮಾತ್ರ ಟಿಕೆಟ್‌ ಬುಕ್ಕಿಂಗ್‌

ಬೆಂಗಳೂರು: ಮಾರ್ಚ್.‌28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಬಗ್ಗೆ ಮಾತನಾಡಿದ ಕಮಿಷನರ್‌ ಸೀಮಂತ್‌ ಕುಮಾರ್‌…

2 hours ago

ಇಂದು ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ

ಬೆಂಗಳೂರು: 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಇಂದು ಸಂಜೆ ತಿಗಳರಪೇಟೆಯ…

3 hours ago

ವಿಧಾನಮಂಡಲ ಅಧಿವೇಶನ ಒಂದು ದಿನ ಮೊಟಕು.?

ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.‌27ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಮಾರ್ಚ್.‌26ರಂದು ಕೊನೆಗೊಳ್ಳಲಿದೆ.…

3 hours ago

ಕೊಲಂಬಿಯಾದಲ್ಲಿ 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ: 66 ಮಂದಿ ದುರ್ಮರಣ

ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್‌ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…

4 hours ago