ಮೈಸೂರು: ಮುಡಾ ಹಗರಣದ ಪ್ರಮುಖ ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.
ನನ್ನ ಹೋರಾಟ ನಿಲ್ಲಿಸಲು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಅವರ ಆಪ್ತರು ಆಮಿಷವೊಡ್ಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಕಳೆದ ಮೂರು ದಿನಗಳಿಂದ ಎಲ್ಲಿಯೂ ಕಾಣಿಸಿಕೊಳ್ಳದ ಸ್ನೇಹಮಯಿ ಕೃಷ್ಣ ಇದೀಗ ಮತ್ತೆ ಪ್ರತ್ಯಕ್ಷರಾಗಿದ್ದು, ಹೋರಾಟ ಹತ್ತಿಕ್ಕಲು ನನ್ನ ವಿರುದ್ಧ ಸುಳ್ಳು ಕೇಸ್ ದಾಖಲಿಸಲಾಗಿದೆ ಎಂದು ಕಿಡಿಕಾರಿದ್ದಾರೆ.
ಪ್ರಕರಣದ ಬಗ್ಗೆ ಕೂಲಂಕುಷವಾಗಿ ಮಾಹಿತಿ ನೀಡಿರುವ ಸ್ನೇಹಮಯಿ ಕೃಷ್ಣ ಅವರು, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಆಪ್ತ ಸಹಾಯಕ ಎಂದು ಹೇಳಿಕೊಂಡು ಡಿಸೆಂಬರ್.13ರಂದು ಮುಡಾ ಬಳಿ ನನ್ನನ್ನು ಭೇಟಿ ಮಾಡಿದ್ದರು.
ಪಾರ್ವತಮ್ಮ ಮಾನಸಿಕವಾಗಿ ನೊಂದಿದ್ದಾರೆ. ಪ್ರಕರಣ ಸಿಬಿಐಗೆ ಕೊಡಿ ಎಂಬ ಅರ್ಜಿ ವಾಪಸ್ ಪಡೆಯಿರಿ. ಲೋಕಾಯುಕ್ತದಿಂದ ನಮಗೇನೂ ಸಮಸ್ಯೆಯಿಲ್ಲ. ನಿಮಗೆ ಕೇಳಿದಷ್ಟು ಹಣ ಕೊಡುತ್ತೇನೆ ಎಂದು ಹೇಳಿದ್ದಾನೆ ಎಂದರು.
ಆದರೆ ಇದಕ್ಕೆಲ್ಲಾ ನಾನು ಒಪ್ಪಲಿಲ್ಲ. ಆದರೆ ಸಿಬಿಐ ತನಿಖೆ ಬೇಡ ಎಂದು ಆಮಿಷವೊಡ್ಡಿದ್ದ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡುತ್ತೇನೆ ಎಂದು ತಿಳಿಸಿದ್ದಾರೆ. ನನಗೆ ಹಣದ ಆಮಿಷವೊಡ್ಡಿರುವ ಬಗ್ಗೆಯೂ ದೂರಿನಲ್ಲಿ ಉಲ್ಲೇಖ ಮಾಡುವುದಾಗಿಯೂ ತಿಳಿಸಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ಮುಡಾ ಹಗರಣದ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇನೆ ಎಂದು ಸಿಎಂ ಕುಟುಂಬದ ವಿರುದ್ಧ ಕಿಡಿಕಾರಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…