ಬೆಂಗಳೂರು: ಹಣಕಾಸಿನ ಸಮಸ್ಯೆಯಿಂದ ಕಳೆದ 2015ರಲ್ಲಿ ಸ್ಥಗಿತಗೊಂಡಿದ್ದ ಮೈಸೂರು ಪೇಪರ್ ಮಿಲ್ಸ್ ಅನ್ನು ಮತ್ತೆ ಪುನರಾರಂಭ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿರುವ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು, ಹಣಕಾಸಿನ ಸಮಸ್ಯೆಯಿಂದ ಕಳೆದ 2015ರಲ್ಲಿ ಮೈಸೂರು ಪೇಪರ್ ಮಿಲ್ಸ್ ಅನ್ನು ಸ್ಥಗಿತ ಮಾಡಲಾಗಿತ್ತು. ಆದರೆ ಇದನ್ನು ಪುನರಾರಂಭ ಮಾಡಲು ಸರ್ಕಾರ ಚಿಂತನೆ ನಡೆಸಿದ್ದು, ಖಾಸಗಿಯವರ ಸಹಭಾಗಿತ್ವದಲ್ಲಿ ಪುನರಾರಂಭ ಮಾಡುತ್ತೇವೆ ಎಂದು ಸಚಿವರು ಹೇಳಿದ್ದಾರೆ.
ಇನ್ನೂ ಮುಂದುವರಿದು ಮಾತನಾಡಿದ ಸಚಿವ ಎಂ.ಬಿ.ಪಾಟೀಲ್ ಅವರು, ಕಾಗದ ಕಾರ್ಖಾನೆಗೆ ನೀಲಗಿರಿ ಅವಶ್ಯಕತೆ ಇದೆ. ಆದ್ರೆ ನಮ್ಮಲ್ಲಿ ನೀಲಗಿರಿ ಬೆಳೆಯಲು ನಿಷೇಧ ಇದೆ. ಹೀಗಾಗಿ ಯಾವ ಖಾಸಗಿಯವರು ಕೂಡ ಮುಂದೆ ಬರುತ್ತಿಲ್ಲ. ಆದ್ರೆ ನಾವು ಮೈಸೂರು ಪೇಪರ್ ಮಿಲ್ಸ್ ಕಾರ್ಖಾನೆ ಪುನರಾರಂಭ ಮಾಡಲು ಉತ್ಸುಕರಾಗಿದ್ದೇವೆ ಎಂದರು.
ಇನ್ನೂ ಅರಣ್ಯ ಇಲಾಖೆಯ ತಜ್ಞರ ಸಮಿತಿಯು ನೀಲಗಿರಿ ಬೆಳೆಯಲು ಕಾರ್ಖಾನೆಗೆ ವಿನಾಯಿತಿ ನೀಡುವ ಸಂಬಂಧ ಪರಿಶೀಲನೆ ನಡೆಸಿ ಆ ವರದಿ ನೀಡಬೇಕು. ಬಳಿಕ ಕಂಪನಿಯ ಸಾಲ, ಬಾಕಿ ಕುರಿತು ಆರ್ಥಿಕ ಇಲಾಖೆ ಜೊತೆ ಸಮಾಲೋಚನೆ ನಡೆಸಲಾಗುತ್ತದೆ. ಸಮಾಲೋಚನೆ ಬಳಿಕ ಎಲ್ಲಾ ವಿಷಯಗಳ ಬಗ್ಗೆ ನಿರ್ಧಾರ ಆದಮೇಲೆ ಕಾರ್ಖಾನೆ ಪ್ರಾರಂಭದ ಬಗ್ಗೆ ಸೂಕ್ತ ಕ್ರಮ ವಹಿಸುತ್ತೇವೆ ಎಂದು ಭರವಸೆ ನೀಡಿದರು.
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…
ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾ ಜಿದ್ದಿನ ರಣರಂಗವಾಗಿ ಏರ್ಪಟ್ಟು, 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ…