ಬೆಂಗಳೂರು: ಹಣಕಾಸಿನ ಸಮಸ್ಯೆಯಿಂದ ಕಳೆದ 2015ರಲ್ಲಿ ಸ್ಥಗಿತಗೊಂಡಿದ್ದ ಮೈಸೂರು ಪೇಪರ್ ಮಿಲ್ಸ್ ಅನ್ನು ಮತ್ತೆ ಪುನರಾರಂಭ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿರುವ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು, ಹಣಕಾಸಿನ ಸಮಸ್ಯೆಯಿಂದ ಕಳೆದ 2015ರಲ್ಲಿ ಮೈಸೂರು ಪೇಪರ್ ಮಿಲ್ಸ್ ಅನ್ನು ಸ್ಥಗಿತ ಮಾಡಲಾಗಿತ್ತು. ಆದರೆ ಇದನ್ನು ಪುನರಾರಂಭ ಮಾಡಲು ಸರ್ಕಾರ ಚಿಂತನೆ ನಡೆಸಿದ್ದು, ಖಾಸಗಿಯವರ ಸಹಭಾಗಿತ್ವದಲ್ಲಿ ಪುನರಾರಂಭ ಮಾಡುತ್ತೇವೆ ಎಂದು ಸಚಿವರು ಹೇಳಿದ್ದಾರೆ.
ಇನ್ನೂ ಮುಂದುವರಿದು ಮಾತನಾಡಿದ ಸಚಿವ ಎಂ.ಬಿ.ಪಾಟೀಲ್ ಅವರು, ಕಾಗದ ಕಾರ್ಖಾನೆಗೆ ನೀಲಗಿರಿ ಅವಶ್ಯಕತೆ ಇದೆ. ಆದ್ರೆ ನಮ್ಮಲ್ಲಿ ನೀಲಗಿರಿ ಬೆಳೆಯಲು ನಿಷೇಧ ಇದೆ. ಹೀಗಾಗಿ ಯಾವ ಖಾಸಗಿಯವರು ಕೂಡ ಮುಂದೆ ಬರುತ್ತಿಲ್ಲ. ಆದ್ರೆ ನಾವು ಮೈಸೂರು ಪೇಪರ್ ಮಿಲ್ಸ್ ಕಾರ್ಖಾನೆ ಪುನರಾರಂಭ ಮಾಡಲು ಉತ್ಸುಕರಾಗಿದ್ದೇವೆ ಎಂದರು.
ಇನ್ನೂ ಅರಣ್ಯ ಇಲಾಖೆಯ ತಜ್ಞರ ಸಮಿತಿಯು ನೀಲಗಿರಿ ಬೆಳೆಯಲು ಕಾರ್ಖಾನೆಗೆ ವಿನಾಯಿತಿ ನೀಡುವ ಸಂಬಂಧ ಪರಿಶೀಲನೆ ನಡೆಸಿ ಆ ವರದಿ ನೀಡಬೇಕು. ಬಳಿಕ ಕಂಪನಿಯ ಸಾಲ, ಬಾಕಿ ಕುರಿತು ಆರ್ಥಿಕ ಇಲಾಖೆ ಜೊತೆ ಸಮಾಲೋಚನೆ ನಡೆಸಲಾಗುತ್ತದೆ. ಸಮಾಲೋಚನೆ ಬಳಿಕ ಎಲ್ಲಾ ವಿಷಯಗಳ ಬಗ್ಗೆ ನಿರ್ಧಾರ ಆದಮೇಲೆ ಕಾರ್ಖಾನೆ ಪ್ರಾರಂಭದ ಬಗ್ಗೆ ಸೂಕ್ತ ಕ್ರಮ ವಹಿಸುತ್ತೇವೆ ಎಂದು ಭರವಸೆ ನೀಡಿದರು.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…