ರಾಜ್ಯ

ಮೈಸೂರು ಪೇಪರ್‌ ಮಿಲ್ಸ್‌ ಮತ್ತೆ ಪುನರಾರಂಭ: ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಹಣಕಾಸಿನ ಸಮಸ್ಯೆಯಿಂದ ಕಳೆದ 2015ರಲ್ಲಿ ಸ್ಥಗಿತಗೊಂಡಿದ್ದ ಮೈಸೂರು ಪೇಪರ್‌ ಮಿಲ್ಸ್‌ ಅನ್ನು ಮತ್ತೆ ಪುನರಾರಂಭ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿರುವ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಅವರು, ಹಣಕಾಸಿನ ಸಮಸ್ಯೆಯಿಂದ ಕಳೆದ 2015ರಲ್ಲಿ ಮೈಸೂರು ಪೇಪರ್‌ ಮಿಲ್ಸ್‌ ಅನ್ನು ಸ್ಥಗಿತ ಮಾಡಲಾಗಿತ್ತು. ಆದರೆ ಇದನ್ನು ಪುನರಾರಂಭ ಮಾಡಲು ಸರ್ಕಾರ ಚಿಂತನೆ ನಡೆಸಿದ್ದು, ಖಾಸಗಿಯವರ ಸಹಭಾಗಿತ್ವದಲ್ಲಿ ಪುನರಾರಂಭ ಮಾಡುತ್ತೇವೆ ಎಂದು ಸಚಿವರು ಹೇಳಿದ್ದಾರೆ.

ಇನ್ನೂ ಮುಂದುವರಿದು ಮಾತನಾಡಿದ ಸಚಿವ ಎಂ.ಬಿ.ಪಾಟೀಲ್‌ ಅವರು, ಕಾಗದ ಕಾರ್ಖಾನೆಗೆ ನೀಲಗಿರಿ ಅವಶ್ಯಕತೆ ಇದೆ. ಆದ್ರೆ ನಮ್ಮಲ್ಲಿ ನೀಲಗಿರಿ ಬೆಳೆಯಲು ನಿಷೇಧ ಇದೆ. ಹೀಗಾಗಿ ಯಾವ ಖಾಸಗಿಯವರು ಕೂಡ ಮುಂದೆ ಬರುತ್ತಿಲ್ಲ. ಆದ್ರೆ ನಾವು ಮೈಸೂರು ಪೇಪರ್‌ ಮಿಲ್ಸ್‌ ಕಾರ್ಖಾನೆ ಪುನರಾರಂಭ ಮಾಡಲು ಉತ್ಸುಕರಾಗಿದ್ದೇವೆ ಎಂದರು.

ಇನ್ನೂ ಅರಣ್ಯ ಇಲಾಖೆಯ ತಜ್ಞರ ಸಮಿತಿಯು ನೀಲಗಿರಿ ಬೆಳೆಯಲು ಕಾರ್ಖಾನೆಗೆ ವಿನಾಯಿತಿ ನೀಡುವ ಸಂಬಂಧ ಪರಿಶೀಲನೆ ನಡೆಸಿ ಆ ವರದಿ ನೀಡಬೇಕು. ಬಳಿಕ ಕಂಪನಿಯ ಸಾಲ, ಬಾಕಿ ಕುರಿತು ಆರ್ಥಿಕ ಇಲಾಖೆ ಜೊತೆ ಸಮಾಲೋಚನೆ ನಡೆಸಲಾಗುತ್ತದೆ. ಸಮಾಲೋಚನೆ ಬಳಿಕ ಎಲ್ಲಾ ವಿಷಯಗಳ ಬಗ್ಗೆ ನಿರ್ಧಾರ ಆದಮೇಲೆ ಕಾರ್ಖಾನೆ ಪ್ರಾರಂಭದ ಬಗ್ಗೆ ಸೂಕ್ತ ಕ್ರಮ ವಹಿಸುತ್ತೇವೆ ಎಂದು ಭರವಸೆ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

9 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago