ಬೆಂಗಳೂರು: ಮೈಸೂರು ಪೊಲೀಸರು ಕಲ್ಯಾಣ ಮಂಟಪ ನಿರ್ಮಿಸಿಕೊಂಡು ದಂಧೆ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ವಿಧಾನಪರಿಷತ್ ಕಲಾಪದಲ್ಲಿ ಮಾತನಾಡಿದ ಅವರು, ಮೈಸೂರು ಮಹಾರಾಜರು ಹಿಂದೆ ಪೊಲೀಸ್ ಇಲಾಖೆಗೆ ಜಾಗ ಕೊಟ್ಟಿದ್ದರು. ಆ ಜಾಗದಲ್ಲಿ ಮೈಸೂರು ಪೊಲೀಸರು ಒಂದು ಕಲ್ಯಾಣ ಮಂಟಪ ಕಟ್ಟಿದ್ದಾರೆ. ಅದರ ಅಧ್ಯಕ್ಷರು ಕಮಿಷನರ್ ಆಗಿದ್ದಾರೆ. ಅದರಲ್ಲಿ ಪೊಲೀಸರಿಗೆ ಕಡಿಮೆ ಬಾಡಿಗೆಯಿದ್ದು, ಬೇರೆಯವರಿಗೆ 2 ಲಕ್ಷ ಚಾರ್ಜ್ ಮಾಡುತ್ತಾರೆ. ಈ ಮೂಲಕ ಪೊಲೀಸರೇ ದಂಧೆಯಲ್ಲಿ ಮುಳುಗಿದ್ದಾರೆ. ಈ ಕಲ್ಯಾಣ ಮಂಟಪವನ್ನು ಸರ್ಕಾರ ವಶಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಉತ್ತರಿಸಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಪ್ರತೀ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಗೆ ಒಂದು ವಿಶೇಷ ನಿಧಿ ಇದೆ. ಅದರ ಹಣದಲ್ಲಿ ಅವರು ಸಮುದಾಯ ಭವನ, ಶಾಲೆ ಎಲ್ಲಾ ಕಟ್ಟಿಕೊಂಡಿರುತ್ತಾರೆ. ಮೈಸೂರಿನಲ್ಲೂ ಪೊಲೀಸರು ಉತ್ತಮವಾಗಿ ಮಾಡಿಕೊಂಡಿದ್ದಾರೆ. ಪೊಲೀಸರು ರಿಯಲ್ ಎಸ್ಟೇಟ್ ದಂಧೆ ಮಾಡುತ್ತಿದ್ದಾರೆ ಅಂದರೆ ಅದನ್ನು ನಾನು ಸಹಿಸಲ್ಲ ಎಂದು ಎಚ್ಚರಿಕೆ ನೀಡಿದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…