ಬೆಂಗಳೂರು: ಮೈಸೂರು ಪೊಲೀಸರು ಕಲ್ಯಾಣ ಮಂಟಪ ನಿರ್ಮಿಸಿಕೊಂಡು ದಂಧೆ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ವಿಧಾನಪರಿಷತ್ ಕಲಾಪದಲ್ಲಿ ಮಾತನಾಡಿದ ಅವರು, ಮೈಸೂರು ಮಹಾರಾಜರು ಹಿಂದೆ ಪೊಲೀಸ್ ಇಲಾಖೆಗೆ ಜಾಗ ಕೊಟ್ಟಿದ್ದರು. ಆ ಜಾಗದಲ್ಲಿ ಮೈಸೂರು ಪೊಲೀಸರು ಒಂದು ಕಲ್ಯಾಣ ಮಂಟಪ ಕಟ್ಟಿದ್ದಾರೆ. ಅದರ ಅಧ್ಯಕ್ಷರು ಕಮಿಷನರ್ ಆಗಿದ್ದಾರೆ. ಅದರಲ್ಲಿ ಪೊಲೀಸರಿಗೆ ಕಡಿಮೆ ಬಾಡಿಗೆಯಿದ್ದು, ಬೇರೆಯವರಿಗೆ 2 ಲಕ್ಷ ಚಾರ್ಜ್ ಮಾಡುತ್ತಾರೆ. ಈ ಮೂಲಕ ಪೊಲೀಸರೇ ದಂಧೆಯಲ್ಲಿ ಮುಳುಗಿದ್ದಾರೆ. ಈ ಕಲ್ಯಾಣ ಮಂಟಪವನ್ನು ಸರ್ಕಾರ ವಶಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಉತ್ತರಿಸಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಪ್ರತೀ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಗೆ ಒಂದು ವಿಶೇಷ ನಿಧಿ ಇದೆ. ಅದರ ಹಣದಲ್ಲಿ ಅವರು ಸಮುದಾಯ ಭವನ, ಶಾಲೆ ಎಲ್ಲಾ ಕಟ್ಟಿಕೊಂಡಿರುತ್ತಾರೆ. ಮೈಸೂರಿನಲ್ಲೂ ಪೊಲೀಸರು ಉತ್ತಮವಾಗಿ ಮಾಡಿಕೊಂಡಿದ್ದಾರೆ. ಪೊಲೀಸರು ರಿಯಲ್ ಎಸ್ಟೇಟ್ ದಂಧೆ ಮಾಡುತ್ತಿದ್ದಾರೆ ಅಂದರೆ ಅದನ್ನು ನಾನು ಸಹಿಸಲ್ಲ ಎಂದು ಎಚ್ಚರಿಕೆ ನೀಡಿದರು.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…