ಬೆಂಗಳೂರು: ಮೈಸೂರು ಪೊಲೀಸರು ಕಲ್ಯಾಣ ಮಂಟಪ ನಿರ್ಮಿಸಿಕೊಂಡು ದಂಧೆ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ವಿಧಾನಪರಿಷತ್ ಕಲಾಪದಲ್ಲಿ ಮಾತನಾಡಿದ ಅವರು, ಮೈಸೂರು ಮಹಾರಾಜರು ಹಿಂದೆ ಪೊಲೀಸ್ ಇಲಾಖೆಗೆ ಜಾಗ ಕೊಟ್ಟಿದ್ದರು. ಆ ಜಾಗದಲ್ಲಿ ಮೈಸೂರು ಪೊಲೀಸರು ಒಂದು ಕಲ್ಯಾಣ ಮಂಟಪ ಕಟ್ಟಿದ್ದಾರೆ. ಅದರ ಅಧ್ಯಕ್ಷರು ಕಮಿಷನರ್ ಆಗಿದ್ದಾರೆ. ಅದರಲ್ಲಿ ಪೊಲೀಸರಿಗೆ ಕಡಿಮೆ ಬಾಡಿಗೆಯಿದ್ದು, ಬೇರೆಯವರಿಗೆ 2 ಲಕ್ಷ ಚಾರ್ಜ್ ಮಾಡುತ್ತಾರೆ. ಈ ಮೂಲಕ ಪೊಲೀಸರೇ ದಂಧೆಯಲ್ಲಿ ಮುಳುಗಿದ್ದಾರೆ. ಈ ಕಲ್ಯಾಣ ಮಂಟಪವನ್ನು ಸರ್ಕಾರ ವಶಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಉತ್ತರಿಸಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಪ್ರತೀ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಗೆ ಒಂದು ವಿಶೇಷ ನಿಧಿ ಇದೆ. ಅದರ ಹಣದಲ್ಲಿ ಅವರು ಸಮುದಾಯ ಭವನ, ಶಾಲೆ ಎಲ್ಲಾ ಕಟ್ಟಿಕೊಂಡಿರುತ್ತಾರೆ. ಮೈಸೂರಿನಲ್ಲೂ ಪೊಲೀಸರು ಉತ್ತಮವಾಗಿ ಮಾಡಿಕೊಂಡಿದ್ದಾರೆ. ಪೊಲೀಸರು ರಿಯಲ್ ಎಸ್ಟೇಟ್ ದಂಧೆ ಮಾಡುತ್ತಿದ್ದಾರೆ ಅಂದರೆ ಅದನ್ನು ನಾನು ಸಹಿಸಲ್ಲ ಎಂದು ಎಚ್ಚರಿಕೆ ನೀಡಿದರು.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…