ಬೆಂಗಳೂರು: ಮೈಸೂರು ಪೊಲೀಸರು ಕಲ್ಯಾಣ ಮಂಟಪ ನಿರ್ಮಿಸಿಕೊಂಡು ದಂಧೆ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ವಿಧಾನಪರಿಷತ್ ಕಲಾಪದಲ್ಲಿ ಮಾತನಾಡಿದ ಅವರು, ಮೈಸೂರು ಮಹಾರಾಜರು ಹಿಂದೆ ಪೊಲೀಸ್ ಇಲಾಖೆಗೆ ಜಾಗ ಕೊಟ್ಟಿದ್ದರು. ಆ ಜಾಗದಲ್ಲಿ ಮೈಸೂರು ಪೊಲೀಸರು ಒಂದು ಕಲ್ಯಾಣ ಮಂಟಪ ಕಟ್ಟಿದ್ದಾರೆ. ಅದರ ಅಧ್ಯಕ್ಷರು ಕಮಿಷನರ್ ಆಗಿದ್ದಾರೆ. ಅದರಲ್ಲಿ ಪೊಲೀಸರಿಗೆ ಕಡಿಮೆ ಬಾಡಿಗೆಯಿದ್ದು, ಬೇರೆಯವರಿಗೆ 2 ಲಕ್ಷ ಚಾರ್ಜ್ ಮಾಡುತ್ತಾರೆ. ಈ ಮೂಲಕ ಪೊಲೀಸರೇ ದಂಧೆಯಲ್ಲಿ ಮುಳುಗಿದ್ದಾರೆ. ಈ ಕಲ್ಯಾಣ ಮಂಟಪವನ್ನು ಸರ್ಕಾರ ವಶಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಉತ್ತರಿಸಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಪ್ರತೀ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಗೆ ಒಂದು ವಿಶೇಷ ನಿಧಿ ಇದೆ. ಅದರ ಹಣದಲ್ಲಿ ಅವರು ಸಮುದಾಯ ಭವನ, ಶಾಲೆ ಎಲ್ಲಾ ಕಟ್ಟಿಕೊಂಡಿರುತ್ತಾರೆ. ಮೈಸೂರಿನಲ್ಲೂ ಪೊಲೀಸರು ಉತ್ತಮವಾಗಿ ಮಾಡಿಕೊಂಡಿದ್ದಾರೆ. ಪೊಲೀಸರು ರಿಯಲ್ ಎಸ್ಟೇಟ್ ದಂಧೆ ಮಾಡುತ್ತಿದ್ದಾರೆ ಅಂದರೆ ಅದನ್ನು ನಾನು ಸಹಿಸಲ್ಲ ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…