ರಾಜ್ಯ

ಮೈಸೂರು ಮೃಗಾಲಯದಲ್ಲಿ 9 ಮಂದಿ ಮಾತ್ರ ಖಾಯಂ ನೌಕರರಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ಬೆಳಗಾವಿ: ಮೈಸೂರು ನಗರದಲ್ಲಿರುವ ಚಾಮರಾಜೇಂದ್ರ ಮೃಗಾಲಯದಲ್ಲಿ 356 ನೌಕರರು ಕಾರ್ಯ ನಿರ್ವಹಿಸುತ್ತಿದ್ದು, ಕೇವಲ 9 ಮಂದಿ ಮಾತ್ರ ಖಾಯಂ ನೌಕರರಾಗಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ವಿಧಾನಸಭೆಗೆ ತಿಳಿಸಿದರು.

ಇದನ್ನು ಓದಿ: ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ಧ: ಸಚಿವ ಕೃಷ್ಣಭೈರೇಗೌಡ

ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಶ್ರೀವತ್ಸ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮೈಸೂರು ಮೃಗಾಲಯದಲ್ಲಿ 139 ಮಂಜೂರಾದ ಹುದ್ದೆಗಳು ಇದ್ದು, ಈ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆದು ನೇರ ನೇಮಕಾತಿ ಮಾಡಲಾಗುವುದು. ನೇರ ಗುತ್ತಿಗೆಯ 75 ನೌಕರರಿದ್ದು, ನೇಮಕ ಸಂದರ್ಭದಲ್ಲಿ ಅವರಿಗೆ ವಯೋಮಿತಿ ಸಡಿಲಿಕೆ ಅನುಭವದ ಆಧಾರದ ಮೇಲೆ ನೇಮಕಾತಿಯಲ್ಲಿ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಮೃಗಾಲಯದಲ್ಲಿ ನಿಯೋಜಿತ ಅಧಿಕಾರಿಗಳು 9, ಹೊರಗುತ್ತಿಗೆ ನೌಕರರು 164 ಹಾಗೂ 99 ಭದ್ರತಾ ಸಿಬ್ಬಂದಿಗಳಿದ್ದಾರೆ. ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

11 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

16 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

20 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

20 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

20 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

23 hours ago