ಬೆಂಗಳೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ಒರಿಜಿನಲ್ ವಿನಾಯಕ ಮೈಲಾರಿ-1938 ಹೋಟೆಲ್ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಇಂದಿರಾನಗರದ 80 ಅಡಿ ರಸ್ತೆಯಲ್ಲಿ ನಡೆದ ಸಮಾರಂಭದಲ್ಲಿ ಹೋಟೆಲ್ ಉದ್ಘಾಟಿಸಿದ ಬಳಿಕ, ಸಿಎಂ ಸಿದ್ದರಾಮಯ್ಯ ಅವರು ಖುದ್ದಾಗಿ ಕುಳಿತು ಪ್ರಸಿದ್ಧ ಬೆಣ್ಣೆ ಖಾಲಿ ದೋಸೆ ಮತ್ತು ಕಾಶಿ ಹಲ್ವಾವನ್ನು ಸವಿದರು. ದೋಸೆಯ ರುಚಿಗೆ ತಲೆದೂಗಿದ ಅವರು, ನಾನು ಮೈಸೂರಿನಲ್ಲಿ ಅನೇಕ ಬಾರಿ ಈ ದೋಸೆ ಸವಿದಿದ್ದೇನೆ. ಈಗ ಬೆಂಗಳೂರಿನಲ್ಲೂ ಅದೇ ಅಪ್ಪಟ ರುಚಿ ಸಿಗುತ್ತಿದೆ. ಆಹಾರ ಪ್ರಿಯರು ಇನ್ನುಮುಂದೆ ಮೈಲಾರಿ ದೋಸೆಗಾಗಿ ಮೈಸೂರಿಗೆ ಹೋಗುವ ಅಗತ್ಯವಿಲ್ಲ, ಅದು ಈಗ ನಮ್ಮ ಇಂದಿರಾನಗರದಲ್ಲೇ ಸಿಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
1938ರಲ್ಲಿ ಗೌರಮ್ಮನವರು ಮೈಸೂರಿನ ನಜರ್ಬಾದ್ನಲ್ಲಿ ಆರಂಭಿಸಿದ್ದ ಈ ರುಚಿಯ ಪರಂಪರೆಯನ್ನು, ಇದೀಗ ನಾಲ್ಕನೇ ತಲೆಮಾರಿನ ಸಚಿನ್ ಮತ್ತು ಸಿಂಧು ದಂಪತಿ ಬೆಂಗಳೂರಿಗೆ ವಿಸ್ತರಿಸಿದ್ದಾರೆ. ಬಾಳೆ ಎಲೆ ಊಟ ಮತ್ತು ಹಳ್ಳಿ ಸೊಗಡಿನ ದೇಸಿ ರುಚಿಯನ್ನು ಉಳಿಸಿಕೊಂಡು ಹೋಗುವುದು ತಮ್ಮ ಗುರಿ ಎಂದು ಹೋಟೆಲ್ ಮಾಲೀಕರು ತಿಳಿಸಿದರು. ಡಾ.ರಾಜ್ಕುಮಾರ್ರಿಂದ ಹಿಡಿದು ಸಚಿನ್ ತೆಂಡೂಲ್ಕರ್ವರೆಗೆ ಮತ್ತು ಬಿಬಿಸಿ ಪಟ್ಟಿಯಲ್ಲೂ ಸ್ಥಾನ ಪಡೆದಿದ್ದ ಈ ಹೋಟೆಲ್ ಇಂದಿನಿಂದ ಅಧಿಕೃತವಾಗಿ ಬೆಂಗಳೂರಿಗರ ಸೇವೆಗೆ ಲಭ್ಯವಾಗಿದೆ.
ಕಾರ್ಯಕ್ರಮದಲ್ಲಿ ಶಾಸಕರಾದ ರಿಜ್ವಾನ್ ಅರ್ಷದ್, ಜಿ.ಟಿ.ದೇವೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವರು ಉಪಸ್ಥಿತರಿದ್ದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…