ಬೆಂಗಳೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ಒರಿಜಿನಲ್ ವಿನಾಯಕ ಮೈಲಾರಿ-1938 ಹೋಟೆಲ್ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಇಂದಿರಾನಗರದ 80 ಅಡಿ ರಸ್ತೆಯಲ್ಲಿ ನಡೆದ ಸಮಾರಂಭದಲ್ಲಿ ಹೋಟೆಲ್ ಉದ್ಘಾಟಿಸಿದ ಬಳಿಕ, ಸಿಎಂ ಸಿದ್ದರಾಮಯ್ಯ ಅವರು ಖುದ್ದಾಗಿ ಕುಳಿತು ಪ್ರಸಿದ್ಧ ಬೆಣ್ಣೆ ಖಾಲಿ ದೋಸೆ ಮತ್ತು ಕಾಶಿ ಹಲ್ವಾವನ್ನು ಸವಿದರು. ದೋಸೆಯ ರುಚಿಗೆ ತಲೆದೂಗಿದ ಅವರು, ನಾನು ಮೈಸೂರಿನಲ್ಲಿ ಅನೇಕ ಬಾರಿ ಈ ದೋಸೆ ಸವಿದಿದ್ದೇನೆ. ಈಗ ಬೆಂಗಳೂರಿನಲ್ಲೂ ಅದೇ ಅಪ್ಪಟ ರುಚಿ ಸಿಗುತ್ತಿದೆ. ಆಹಾರ ಪ್ರಿಯರು ಇನ್ನುಮುಂದೆ ಮೈಲಾರಿ ದೋಸೆಗಾಗಿ ಮೈಸೂರಿಗೆ ಹೋಗುವ ಅಗತ್ಯವಿಲ್ಲ, ಅದು ಈಗ ನಮ್ಮ ಇಂದಿರಾನಗರದಲ್ಲೇ ಸಿಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
1938ರಲ್ಲಿ ಗೌರಮ್ಮನವರು ಮೈಸೂರಿನ ನಜರ್ಬಾದ್ನಲ್ಲಿ ಆರಂಭಿಸಿದ್ದ ಈ ರುಚಿಯ ಪರಂಪರೆಯನ್ನು, ಇದೀಗ ನಾಲ್ಕನೇ ತಲೆಮಾರಿನ ಸಚಿನ್ ಮತ್ತು ಸಿಂಧು ದಂಪತಿ ಬೆಂಗಳೂರಿಗೆ ವಿಸ್ತರಿಸಿದ್ದಾರೆ. ಬಾಳೆ ಎಲೆ ಊಟ ಮತ್ತು ಹಳ್ಳಿ ಸೊಗಡಿನ ದೇಸಿ ರುಚಿಯನ್ನು ಉಳಿಸಿಕೊಂಡು ಹೋಗುವುದು ತಮ್ಮ ಗುರಿ ಎಂದು ಹೋಟೆಲ್ ಮಾಲೀಕರು ತಿಳಿಸಿದರು. ಡಾ.ರಾಜ್ಕುಮಾರ್ರಿಂದ ಹಿಡಿದು ಸಚಿನ್ ತೆಂಡೂಲ್ಕರ್ವರೆಗೆ ಮತ್ತು ಬಿಬಿಸಿ ಪಟ್ಟಿಯಲ್ಲೂ ಸ್ಥಾನ ಪಡೆದಿದ್ದ ಈ ಹೋಟೆಲ್ ಇಂದಿನಿಂದ ಅಧಿಕೃತವಾಗಿ ಬೆಂಗಳೂರಿಗರ ಸೇವೆಗೆ ಲಭ್ಯವಾಗಿದೆ.
ಕಾರ್ಯಕ್ರಮದಲ್ಲಿ ಶಾಸಕರಾದ ರಿಜ್ವಾನ್ ಅರ್ಷದ್, ಜಿ.ಟಿ.ದೇವೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವರು ಉಪಸ್ಥಿತರಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…