pecocks died
ತುಮಕೂರು: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಐದು ಹುಲಿಗಳು ಹಾಗೂ 18 ಕೋತಿಗಳ ಮಾರಣಹೋಮ ನಡೆದ ಬೆನ್ನಲ್ಲೇ ಇದೀಗ ಕಲ್ಪತರು ನಾಡು ತುಮಕೂರಿನಲ್ಲಿ ರಾಷ್ಟ್ರಪಕ್ಷಿ ನವಿಲುಗಳ ಸಾವು ಸಂಭವಿಸಿದೆ.
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಮಿಡಿಗೇಶಿಯ ಹನುಮಂತಪುರದಲ್ಲಿ 19 ನವಿಲುಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಸದ್ಯ ಸಾವನ್ನಪ್ಪಿರುವ ನವಿಲುಗಳ ಸ್ಯಾಂಪಲ್ನ್ನು ಎಫ್ಎಸ್ಎಲ್ಗೆ ರವಾನೆ ಮಾಡಲಾಗಿದ್ದು, ವರದಿ ಬಂದ ಬಳಿಕವೇ ಸಾವಿಗೆ ನಿಖರ ಕಾರಣ ಏನೆಂದು ತಿಳಿಯಲಿದೆ.
ಮಿಡಿಗೇಶಿಯ ಹನುಮಂತಪುರ ಗ್ರಾಮದ ಕೆರೆ ಕೋಡಿ ನೀರು ಹರಿಯುವ ಪಕ್ಕದ ಜಮೀನಿನಲ್ಲಿ 5 ಗಂಡು ಹಾಗೂ 14 ಹೆಣ್ಣು ನವಿಲುಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಇವು ಆಗಸ್ಟ್.1ರಂದೇ ಮೃತಪಟ್ಟಿವೆ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.
ಕ್ರಿಮಿನಾಶಕ ಸಿಂಪಡಣೆ ಮಾಡಿರುವ ಬೆಳೆಗಳನ್ನು ಸೇವಿಸಿ ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಪ್ರಾಣಿಪ್ರಿಯರು ಬೇಸರ ವ್ಯಕ್ತಪಡಿಸಿದ್ದಾರೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…