ರಾಜ್ಯ

ಮೈಷುಗರ್ಸ್‌ ಅವ್ಯವಹಾರ ತನಿಖೆ : ಸಚಿವ ಶಿವಾನಂದಪಾಟೀಲ

ಬೆಂಗಳೂರು : ಈ ಹಿಂದೆ ಮೈಷುಗರ್ಸ್ ಅಭಿವೃದ್ಧಿಗೆ ಬಿಡುಗಡೆಯಾಗಿದ್ದ 100 ಕೋಟಿ ರೂ.ಗೂ ಅಧಿಕಹಣ ದುರ್ಬಳಕೆಯಾಗಿದ್ದು, ತನಿಖೆ ಮಾಡಿಸಲಾಗುವುದು ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದಪಾಟೀಲ ತಿಳಿಸಿದ್ದಾರೆ.

ವಿಧಾನಪರಿಷತ್ತಿನಲ್ಲಿ ಮಧುಜಿ. ಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಮ್ಮ ಸರ್ಕಾರ ಅಧಿಕಾರಕೆ ಬಂದ ನಂತರ ಮೈಷುಗರ್ಸ್ ಅಭಿವೃದ್ಧಿಗೆ ಕ್ರಮಕೈಗೊಂಡಿದ್ದು, ಪ್ರತಿಶತ 3.5ರಷ್ಟಿದ ಸಕ್ಕರೆ ಇಳುವರಿ ಪ್ರಮಾಣ ಈಗ ಪ್ರತಿಶತ 8ರಷ್ಟಿದೆ. ಸಹ ವಿದ್ಯುತ್ ಘಟಕವನ್ನೂ ನಮ್ಮ ಸರ್ಕಾರ ಬಂದ ನಂತರವೇ ಆರಂಭ ಮಾಡಲಾಗಿದೆ ಎಂದು ತಿಳಿಸಿದರು.

12.21 ಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಲಾಗಿದ್ದು, 7.28 ಲಕ್ಷ ಯೂನಿಟ್‌ಗಳನು ಕಾರ್ಖಾನೆಗೆ ಬಳಕೆಮಾಡಲಾಗಿದೆ. 4.93 ಲಕ್ಷ ಯೂನಿಟ್‌ಗಳನ್ನು ಸೆಸ್ಕ್‌ಗೆ ಪೂರೈಕೆಮಾಡಲಾಗಿದೆ. ಪ್ರತಿ ಯೂನಿಟ್‌ಗೆ 5.91 ರೂ.ಗಳಂತೆ 29.14 ಲಕ್ಷ ರೂ. ಆದಾಯ ಬಂದಿದೆ. ಉತ್ಪಾದಿಸಿದ ಎಲ್ಲ ವಿದ್ಯುತ್ತನ್ನು ಸೆಸ್ಕ್‌ಗೆ ಪೂರೈಕೆ ಮಾಡಿದರೆ 9.48 ಕೋಟಿ ರೂ. ಆದಾಯ ಬರಲಿದೆ ಎಂದರು.

ಬೆಂಗಳೂರಿನಲ್ಲಿರುವ ಮೈಷುಗರ್ಸ್ ಕಂಪೆನಿಯ ಆಡಳಿತ ಕಚೇರಿಯ ಆಸ್ತಿತೆರಿಗೆ 6.50 ಕೋಟಿ ರೂ.ಗಳಷ್ಟಿದ್ದು, ಏಕ ತೀರುವಳಿ ಅಡಿಯಲ್ಲಿ 2.04ಕೋಟಿ ರೂ. ಪಾವತಿಸಿ 4.50 ಕೋಟಿ ರೂ.ಗಳನ್ನು ಕಂಪೆನಿಗೆ ಉಳಿತಾಯ ಮಾಡಲಾಗಿದೆ. ಮೈಷುಗರ್ಸ್ ಕಂಪೆನಿ ಒಡೆತನದಲ್ಲಿ 235.10 ಎಕರೆ ಇದ್ದು, ಎಷ್ಟು ಒತ್ತುವರಿಯಾಗಿದೆ ಎಂಬ ಬಗ್ಗೆ ಸರ್ವೆ ಮಾಡಿಸಿ ಒತ್ತುವರಿ ತೆರವುಗೊಳಿಸಲಾಗುವುದು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

8 mins ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

33 mins ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

60 mins ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

2 hours ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

2 hours ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

2 hours ago