ಬೆಂಗಳೂರು : ಈ ಹಿಂದೆ ಮೈಷುಗರ್ಸ್ ಅಭಿವೃದ್ಧಿಗೆ ಬಿಡುಗಡೆಯಾಗಿದ್ದ 100 ಕೋಟಿ ರೂ.ಗೂ ಅಧಿಕಹಣ ದುರ್ಬಳಕೆಯಾಗಿದ್ದು, ತನಿಖೆ ಮಾಡಿಸಲಾಗುವುದು ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದಪಾಟೀಲ ತಿಳಿಸಿದ್ದಾರೆ.
ವಿಧಾನಪರಿಷತ್ತಿನಲ್ಲಿ ಮಧುಜಿ. ಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಮ್ಮ ಸರ್ಕಾರ ಅಧಿಕಾರಕೆ ಬಂದ ನಂತರ ಮೈಷುಗರ್ಸ್ ಅಭಿವೃದ್ಧಿಗೆ ಕ್ರಮಕೈಗೊಂಡಿದ್ದು, ಪ್ರತಿಶತ 3.5ರಷ್ಟಿದ ಸಕ್ಕರೆ ಇಳುವರಿ ಪ್ರಮಾಣ ಈಗ ಪ್ರತಿಶತ 8ರಷ್ಟಿದೆ. ಸಹ ವಿದ್ಯುತ್ ಘಟಕವನ್ನೂ ನಮ್ಮ ಸರ್ಕಾರ ಬಂದ ನಂತರವೇ ಆರಂಭ ಮಾಡಲಾಗಿದೆ ಎಂದು ತಿಳಿಸಿದರು.
12.21 ಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಲಾಗಿದ್ದು, 7.28 ಲಕ್ಷ ಯೂನಿಟ್ಗಳನು ಕಾರ್ಖಾನೆಗೆ ಬಳಕೆಮಾಡಲಾಗಿದೆ. 4.93 ಲಕ್ಷ ಯೂನಿಟ್ಗಳನ್ನು ಸೆಸ್ಕ್ಗೆ ಪೂರೈಕೆಮಾಡಲಾಗಿದೆ. ಪ್ರತಿ ಯೂನಿಟ್ಗೆ 5.91 ರೂ.ಗಳಂತೆ 29.14 ಲಕ್ಷ ರೂ. ಆದಾಯ ಬಂದಿದೆ. ಉತ್ಪಾದಿಸಿದ ಎಲ್ಲ ವಿದ್ಯುತ್ತನ್ನು ಸೆಸ್ಕ್ಗೆ ಪೂರೈಕೆ ಮಾಡಿದರೆ 9.48 ಕೋಟಿ ರೂ. ಆದಾಯ ಬರಲಿದೆ ಎಂದರು.
ಬೆಂಗಳೂರಿನಲ್ಲಿರುವ ಮೈಷುಗರ್ಸ್ ಕಂಪೆನಿಯ ಆಡಳಿತ ಕಚೇರಿಯ ಆಸ್ತಿತೆರಿಗೆ 6.50 ಕೋಟಿ ರೂ.ಗಳಷ್ಟಿದ್ದು, ಏಕ ತೀರುವಳಿ ಅಡಿಯಲ್ಲಿ 2.04ಕೋಟಿ ರೂ. ಪಾವತಿಸಿ 4.50 ಕೋಟಿ ರೂ.ಗಳನ್ನು ಕಂಪೆನಿಗೆ ಉಳಿತಾಯ ಮಾಡಲಾಗಿದೆ. ಮೈಷುಗರ್ಸ್ ಕಂಪೆನಿ ಒಡೆತನದಲ್ಲಿ 235.10 ಎಕರೆ ಇದ್ದು, ಎಷ್ಟು ಒತ್ತುವರಿಯಾಗಿದೆ ಎಂಬ ಬಗ್ಗೆ ಸರ್ವೆ ಮಾಡಿಸಿ ಒತ್ತುವರಿ ತೆರವುಗೊಳಿಸಲಾಗುವುದು ಎಂದು ಹೇಳಿದರು.
ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರ ಕಾರು ಚಾಲಕನ…
ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…
ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…