ರಾಜ್ಯ

ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಮೈಸೂರಿನ ಉದ್ಯಮಿ ರಮೇಶ್‌ ಕಣ್ಣನ್ ಗೆ ಸ್ಥಾನ!

ಮೈಸೂರು: ಮೈಸೂರಿನ ಉದ್ಯಮಿ ರಮೇಶ್ ಕಣ್ಣನ್ ಅವರು ಇದೇ ಮೊದಲ ಬಾರಿಗೆ ವಿಶ್ವ ಶ್ರೀಮಂತರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಮೈಸೂರಿನಲ್ಲಿ ಮುಖ್ಯಕಚೇರಿ ಹೊಂದಿರುವ ಕೇನ್ಸ್ ಟೆಕ್ನಾಲಜೀಸ್ ಇಂಡಿಯಾ ಕಂಪನಿಯ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿರುವ ಇವರು ಅಮೇರಿಕಾದ ಪೋರ್ಬ್ಸ್ ನಿಯತಕಾಲಿಕೆ ಪ್ರಕಟಿಸುವ ಬಿಲಿಯನೇರ್‌ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಕಳೆದ ವರ್ಷ ಯಶಸ್ವಿಯಾಗಿ ನಡೆದ ಮೂರನೇ ಚಂದ್ರಯಾನ ಯೋಜನೆಗೆ ಕೇನ್ಸ್ ಟೆಕ್ನಾಲಜೀಸ್ ನೌಕೆಯ ಲ್ಯಾಂಡರ್‌ ಹಾಗೂ ರೋವರ್‌ಗೆ ಎಲೆಕ್ಟ್ರಾನಿಕ್‌ ಉಪಕರಣಗಳನ್ನು ಇಸ್ರೊಗೆ ಪೂರೈಕೆ ಮಾಡಿತ್ತು. ಅದಾದ ಬಳಿಕ ಕಂಪನಿಯ ಷೇರು ಸಾಕಷ್ಟು ಬೇಡಿಕೆ ಪಡೆದಿದೆ. ಪರಿಣಾಮವಾಗಿ ಕಂಪನಿ ಮತ್ತು ರಮೇಶ್ ಅವರ ಮಾರುಕಟ್ಟೆ ಸಂಪತ್ತು ಗಣನೀಯವಾಗಿ ಹೆಚ್ಚಳವಾಗಿದೆ.

2024ರ ಸಾಲಿನ ಫೋರ್ಬ್ಸ್ ಇಂಡೆಕ್ಸ್​ನಲ್ಲಿ ಮೊದಲ ಬಾರಿಗೆ ಸೇರ್ಪಡೆಯಾದ 25 ಭಾರತೀಯ ಬಿಲಿಯನೇರ್​ಗಳಲ್ಲಿ ರಮೇಶ್ ಕೂಡ ಒಬ್ಬರು. ಜೆಫ್ ಬೇಜೋಸ್, ಎಲಾನ್ ಮಸ್ಕ್, ಅಂಬಾನಿ, ಅದಾನಿ ಮೊದಲಾದ ದಿಗ್ಗಜರ ಸಾಲಿನಲ್ಲಿ ಇವರೂ ಇದ್ದಂತಾಗಿದೆ. ಫೋರ್ಬ್ಸ್ ಪ್ರಕಾರ ರಮೇಶ್ ಕಣ್ಣನ್ ಅವರ ಆಸ್ತಿಮೌಲ್ಯ 1.2 ಬಿಲಿಯನ್ ಡಾಲರ್ ಇದೆ. ಅಂದರೆ, ಸುಮಾರು 10,000 ಕೋಟಿ ರೂ ಮೊತ್ತದ ಶ್ರೀಮಂತರಾಗಿದ್ದಾರೆ.‌

ರಮೇಶ್‌ ಕಣ್ಣನ್, ಕೇನ್ಸ್ ಟೆಕ್ನಾಲಜೀಸ್‌ ಕಂಪನಿಯನ್ನು 1988ರಲ್ಲಿ ಸ್ಥಾಪಿಸಿದ್ದಾರೆ. ಇದೀಗ ಅವರ ಪತ್ನಿ ಸವಿತಾ ರಮೇಶ್‌ ಆಡಳಿತ ಮಂಡಳಿ ಅಧ್ಯಕ್ಷರಾಗಿದ್ದಾರೆ. ಈ ಕಂಪನಿಯಲ್ಲಿ ರಮೇಶ್‌ ಅವರು ಶೇ 64ರಷ್ಟು ಷೇರು ಹೊಂದಿದ್ದಾರೆ. ಕಂಪನಿಯು 2022 ರ ನವೆಂಬರ್‌ನಲ್ಲಿ ಷೇರು ಮಾರುಕಟ್ಟೆ ಪ್ರವೇಶಿಸಿತ್ತು, ಚಂದ್ರಯಾನ-3ರ ಯಶಸ್ಸಿನ ನಂತರ ಷೇರು ಮೌಲ್ಯ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

55 seconds ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

43 mins ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

1 hour ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

2 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

2 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

2 hours ago