Categories: ರಾಜ್ಯ

ದಿಲ್ಲಿ ರೈತರ ಹೋರಾಟ ಬೆಂಬಲಿಸಿ ಮೌನ ಧರಣಿ: ಕುರಬೂರು ಶಾಂತಕುಮಾರ್‌

ಬೆಂಗಳೂರು: ದೇಶದ ರೈತರ ಬಗ್ಗೆ ನಿರ್ಲಕ್ಷ್ಯ ಭಾವನೆ ತೋರುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ನವೆಂಬರ್‌ 26 ರಂದು ರಾಷ್ಟ್ರೀಯ ರೈತ ಮುಖಂಡ ಜಗಜಿತ್‌ ಸಿಂಗ್‌ ಧಲೆವಾಲಾ ನೇತೃತ್ವದಲ್ಲಿ ನಡೆಯುವ ರೈತರ ಹೋರಾಟ ಬೆಂಬಲಿಸಿ ಮೌನ ಧರಣಿ ಮಾಡಲಾಗುವುದು ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ದಕ್ಷಿಣ ಭಾರತ ಸಂಚಾಲಕ ಕುರಬೂರು ಶಾಂತಕುಮಾರ್‌ ತಿಳಿಸಿದ್ದಾರೆ.

ನಗರದಲ್ಲಿ ಇಂದು (ನ.20) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿ ರೈತರ ಉಪವಾಸ ಸತ್ಯಾಗ್ರಹ ಬೆಂಬಲಿಸಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ರೈತ ಸಂಘಟನೆಗಳು ನವೆಂಬರ್‌ 26 ರಂದು ಮೌನ ಧರಣಿ ನಡೆಸಲಾಗುತ್ತಿದೆ. ಅಲ್ಲದೇ ಈ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಸಂಜೀವ್‌ ಖನ್ನಾ ಅವರಿಗೂ ಮನವಿ ಸಲ್ಲಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ಇನ್ನು ದೆಹಲಿಯಲ್ಲಿ ಮೌನ ಧರಣಿ ನಡೆಸುವ ವೇಳೆ ದೆಹಲಿ ರೈತ ಮುಖಂಡರ ಪ್ರಾಣಕ್ಕೆ ಅಪಾಯ ಆದರೆ ಕೇಂದ್ರ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ. ಅಲ್ಲದೇ ಕೇಂದ್ರ ಇದರಿಂದ ಎಚ್ಚೆತ್ತುಕೊಳ್ಳದೆ ಹೋದರೆ ರಾಜ್ಯದಲ್ಲಿಯೂ ದೆಹಲಿ ಹೋರಾಟ ಬೆಂಬಲಿಸಿ ಸಹಸ್ರಾರು ಸಂಖ್ಯೆಯ ರೈತರ ವಿರುದ್ಧ ಉಪವಾಸ ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಇದೇ ಸಂದರ್ಭದಲ್ಲಿ ರಾಜ್ಯದ ಉತ್ತರ ಕರ್ನಾಟಕ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ ಹಾಗೂ ಗುಲ್ಬರ್ಗ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಕಬ್ಬಿಗೆ ಎಫ್‌ಆರ್‌ಪಿ ಮೇಲೆ ಹೆಚ್ಚುವರಿ ದರ ನಿಗಧಿ ಮಾಡಬೇಕೆಂದು ರೈತರು ಹೋರಾಟ ನಡೆಸುತ್ತಿದ್ದಾರೆ. ಬೆಳಗಾವಿ ಅಧಿವೇಶನ ಶುರುವಾಗುವ ಮುನ್ನವೇ ಸಿಎಂ ಸಿದ್ದರಾಮಯ್ಯ ಅವರು ರೈತ ಮುಖಂಡರ ಸಭೆ ಕರೆದು ರಾಜ್ಯಾದ್ಯಾಂತ ಕಬ್ಬು ಬೆಳೆಗಾರರ ಸಮಸ್ಯೆ ಬಗೆ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

2 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

3 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

3 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

3 hours ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

12 hours ago