ರಾಜ್ಯ ಕಂಡ ಶ್ರೇಷ್ಠ ರಾಜಕಾರಣಿ ,ಧಕ್ಷ ಆಡಳಿತಗಾರ, ಚಿಂತಕ ಅಭಿವೃದ್ದಿಯ ಹರಿಕಾರ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ನಿಧನ ಅತೀವ ದುಃಖ ತಂದಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಕಂಬನಿ ಮಿಡಿದಿದ್ದಾರೆ.
ರಾಜ್ಯ ಹಾಗೂ ದೇಶದ ರಾಜಕಾರಣಕ್ಕೆ ಇದು ತುಂಬಲಾರದ ನಷ್ಟ. ರಾಜ್ಯದ ಅಭಿವೃದ್ದಿಗೆ ಎಸ್.ಎಂ ಕೃಷ್ಣ ಅವರ ಕೊಡುಗೆ ಅಪಾರ. ಅವರು ಅನೇಕ ಸವಾಲುಗಳನ್ನು ದಿಟ್ಟವಾಗಿ ನಿಭಾಯಿಸಿ ಕರ್ನಾಟಕದ ಅಭಿವೃದ್ಧಿಗೆ ಹೊಸ ದಿಕ್ಕು ತೋರಿದ ಧೀಮಂತ ನಾಯಕ ಎಂದು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಎಸ್.ಎಂ ಕೃಷ್ಣ ಒಬ್ಬ ಅಪರೂಪದ ರಾಜಕಾರಣಿ, ವಾಗ್ಮಿ, ಬೆಂಗಳೂರಿನ ಅಭಿವೃದ್ಧಿ ಐ.ಟಿ,ಬಿ.ಟಿ ಉದ್ಯಮದ ಉನ್ನತಿ ಉದ್ಯೋಗಾವಕಾಶಗಳ ಸೃಷ್ಟಿಗೆ ಅವರ ಕೊಡುಗೆ ಅಪಾರ ಎಂದು ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಎಸ್.ಎಂ ಕೃಷ್ಣ ಅವರ ಅಗಲಿಕೆಯಿಂದ ಇಡೀ ರಾಜ್ಯವೇ ಶೋಕಸಾಗರದಲ್ಲಿ ಮುಳುಗಿದ್ದು ಎಲ್ಲರಿಗೂ ದುಃಖ ಬರಿಸುವ ಶಕ್ತಿ ನೀಡಲಿ ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥನೆ ಸಲ್ಲಿಸುವುದಾಗಿ ಕೃಷಿ ಸಚಿವರು ತಿಳಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…