ರಾಜ್ಯ

ಎಸ್‌ಎಂ ಕೃಷ್ಣ‌ ನಿಧನಕ್ಕೆ ಚಲುವರಾಯಸ್ವಾಮಿ ಕಂಬನಿ

ರಾಜ್ಯ ಕಂಡ ಶ್ರೇಷ್ಠ ರಾಜಕಾರಣಿ ,ಧಕ್ಷ ಆಡಳಿತಗಾರ, ಚಿಂತಕ ಅಭಿವೃದ್ದಿಯ ಹರಿಕಾರ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ನಿಧನ ಅತೀವ ದುಃಖ ತಂದಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಕಂಬನಿ ಮಿಡಿದಿದ್ದಾರೆ.

ರಾಜ್ಯ ಹಾಗೂ ದೇಶದ ರಾಜಕಾರಣಕ್ಕೆ ಇದು ತುಂಬಲಾರದ ನಷ್ಟ. ರಾಜ್ಯದ ಅಭಿವೃದ್ದಿಗೆ ಎಸ್.ಎಂ ಕೃಷ್ಣ ಅವರ ಕೊಡುಗೆ ಅಪಾರ. ಅವರು ಅನೇಕ ಸವಾಲುಗಳನ್ನು ದಿಟ್ಟವಾಗಿ ನಿಭಾಯಿಸಿ ಕರ್ನಾಟಕದ ಅಭಿವೃದ್ಧಿಗೆ ಹೊಸ ದಿಕ್ಕು ತೋರಿದ ಧೀಮಂತ ನಾಯಕ ಎಂದು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಎಸ್.ಎಂ ಕೃಷ್ಣ ಒಬ್ಬ ಅಪರೂಪದ ರಾಜಕಾರಣಿ, ವಾಗ್ಮಿ, ಬೆಂಗಳೂರಿನ ಅಭಿವೃದ್ಧಿ ಐ.ಟಿ,ಬಿ.ಟಿ ಉದ್ಯಮದ ಉನ್ನತಿ ಉದ್ಯೋಗಾವಕಾಶಗಳ ಸೃಷ್ಟಿಗೆ ಅವರ ಕೊಡುಗೆ ಅಪಾರ ಎಂದು ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಎಸ್.ಎಂ ಕೃಷ್ಣ ಅವರ ಅಗಲಿಕೆಯಿಂದ ಇಡೀ ರಾಜ್ಯವೇ ಶೋಕಸಾಗರದಲ್ಲಿ ಮುಳುಗಿದ್ದು ಎಲ್ಲರಿಗೂ ದುಃಖ ಬರಿಸುವ ಶಕ್ತಿ ನೀಡಲಿ ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥನೆ ಸಲ್ಲಿಸುವುದಾಗಿ ಕೃಷಿ ಸಚಿವರು ತಿಳಿಸಿದ್ದಾರೆ.

andolana

Recent Posts

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

13 mins ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

45 mins ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

2 hours ago

ಆಂದೋಲನ ಸಂಪಾದಕೀಯ | ಇಂಧನ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಲಿ

ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.25 ಸೋಮವಾರ

5 hours ago