ರಾಜ್ಯ ಕಂಡ ಶ್ರೇಷ್ಠ ರಾಜಕಾರಣಿ ,ಧಕ್ಷ ಆಡಳಿತಗಾರ, ಚಿಂತಕ ಅಭಿವೃದ್ದಿಯ ಹರಿಕಾರ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ನಿಧನ ಅತೀವ ದುಃಖ ತಂದಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಕಂಬನಿ ಮಿಡಿದಿದ್ದಾರೆ.
ರಾಜ್ಯ ಹಾಗೂ ದೇಶದ ರಾಜಕಾರಣಕ್ಕೆ ಇದು ತುಂಬಲಾರದ ನಷ್ಟ. ರಾಜ್ಯದ ಅಭಿವೃದ್ದಿಗೆ ಎಸ್.ಎಂ ಕೃಷ್ಣ ಅವರ ಕೊಡುಗೆ ಅಪಾರ. ಅವರು ಅನೇಕ ಸವಾಲುಗಳನ್ನು ದಿಟ್ಟವಾಗಿ ನಿಭಾಯಿಸಿ ಕರ್ನಾಟಕದ ಅಭಿವೃದ್ಧಿಗೆ ಹೊಸ ದಿಕ್ಕು ತೋರಿದ ಧೀಮಂತ ನಾಯಕ ಎಂದು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಎಸ್.ಎಂ ಕೃಷ್ಣ ಒಬ್ಬ ಅಪರೂಪದ ರಾಜಕಾರಣಿ, ವಾಗ್ಮಿ, ಬೆಂಗಳೂರಿನ ಅಭಿವೃದ್ಧಿ ಐ.ಟಿ,ಬಿ.ಟಿ ಉದ್ಯಮದ ಉನ್ನತಿ ಉದ್ಯೋಗಾವಕಾಶಗಳ ಸೃಷ್ಟಿಗೆ ಅವರ ಕೊಡುಗೆ ಅಪಾರ ಎಂದು ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಎಸ್.ಎಂ ಕೃಷ್ಣ ಅವರ ಅಗಲಿಕೆಯಿಂದ ಇಡೀ ರಾಜ್ಯವೇ ಶೋಕಸಾಗರದಲ್ಲಿ ಮುಳುಗಿದ್ದು ಎಲ್ಲರಿಗೂ ದುಃಖ ಬರಿಸುವ ಶಕ್ತಿ ನೀಡಲಿ ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥನೆ ಸಲ್ಲಿಸುವುದಾಗಿ ಕೃಷಿ ಸಚಿವರು ತಿಳಿಸಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…