ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್ ಅವರಿಗೂ ಜಾರಿ ನಿರ್ದೇಶನಾಲಯ(ಇ.ಡಿ.) ನೋಟಿಸ್ ನೀಡಿರುವುದು ರಾಜಕೀಯ ಪ್ರೇರಿತವಾಗಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಜನವರಿ.28) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾದಲ್ಲಿ 50:50 ಅನುಪಾತದಲ್ಲಿ ಬದಲಿಯಾಗಿ ನಿವೇಶನ ಹಂಚಿಕೆಯಾಗಿದೆ. ಈ ನಿವೇಶನ ಹಂಚಿಕೆಯಾಗಿರುವುದು ಬಿಜೆಪಿ ಅವಧಿಯಲದಲ್ಲೇ,ತನಿಖೆ ಆದರೆ ಬಿಜೆಪಿ ಅವಧಿಯೊಂದಲೇ ತನಿಖೆಯಾಗಬೇಕು. ಹಾಗಾಗಿ ನಮಗೆ ಯಾವುದೇ ಆತಂಕವಿಲ್ಲ ಎಂದರು.
ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು ಮುಡಾ ಕಚೇರಿಗೆ ತಮ್ಮ ನಿವೇಶನಗಳನ್ನು ಹಿಂತಿರುಗಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ. ಅವರ ನೇತೃತ್ವದಲ್ಲೇ ರಾಜ್ಯ ಸರ್ಕಾರ ಆಡಳಿತ ನಡೆಸುತ್ತಿದೆ. ಹೀಗಾಗಿ ಇದನ್ನು ಬಿಜೆಪಿಗೆ ಸಹಿಸಲು ಆಗುತ್ತಿಲ್ಲ ಎಂದು ಆರೋಪಿಸಿದರು.
ನಮ್ಮ ಪಕ್ಷ ಸತತ ಮೂರು ಮರು ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದು, 2028ರ ವಿಧಾನಸಭಾ ಚುನಾವಣೆಯಲ್ಲಿಯೂ ಸಹ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ. ಹೈಕಮಾಂಡ್ ತೀರ್ಮಾನವೇ ನಮ್ಮ ಪಕ್ಷದ ಅಂತಿಮ ತೀರ್ಮಾನವಾಗಿದೆ. ಹೀಗಾಗಿ ಸಿಎಂ ಮತ್ತು ಡಿಸಿಎಂ ವಿಚಾರದಲ್ಲಿಯೂ ಹೈಕಮಾಂಡ್ನ ನಿರ್ಧಾರವೇ ಅಂತಿಮವಾಗಿದೆ. ಆದರೆ ಬಿಜೆಪಿಯಲ್ಲಿರುವಷ್ಟು ಗೊಂದಲ ನಮ್ಮಲ್ಲಿ ಇಲ್ಲ ಎಂದು ಹೇಳಿದರು.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…