ರಾಜ್ಯ

ಮುಡಾ ಹಗರಣ| ಇ.ಡಿ.ನೋಟಿಸ್‌ ರಾಜಕೀಯ ಪ್ರೇರಿತ: ಚಲುವರಾಯಸ್ವಾಮಿ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್‌ ಅವರಿಗೂ ಜಾರಿ ನಿರ್ದೇಶನಾಲಯ(ಇ.ಡಿ.) ನೋಟಿಸ್‌ ನೀಡಿರುವುದು ರಾಜಕೀಯ ಪ್ರೇರಿತವಾಗಿದೆ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಜನವರಿ.28) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾದಲ್ಲಿ 50:50 ಅನುಪಾತದಲ್ಲಿ ಬದಲಿಯಾಗಿ ನಿವೇಶನ ಹಂಚಿಕೆಯಾಗಿದೆ. ಈ ನಿವೇಶನ ಹಂಚಿಕೆಯಾಗಿರುವುದು ಬಿಜೆಪಿ ಅವಧಿಯಲದಲ್ಲೇ,ತನಿಖೆ ಆದರೆ ಬಿಜೆಪಿ ಅವಧಿಯೊಂದಲೇ ತನಿಖೆಯಾಗಬೇಕು. ಹಾಗಾಗಿ ನಮಗೆ ಯಾವುದೇ ಆತಂಕವಿಲ್ಲ ಎಂದರು.

ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು ಮುಡಾ ಕಚೇರಿಗೆ ತಮ್ಮ ನಿವೇಶನಗಳನ್ನು ಹಿಂತಿರುಗಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ. ಅವರ ನೇತೃತ್ವದಲ್ಲೇ ರಾಜ್ಯ ಸರ್ಕಾರ ಆಡಳಿತ ನಡೆಸುತ್ತಿದೆ. ಹೀಗಾಗಿ ಇದನ್ನು ಬಿಜೆಪಿಗೆ ಸಹಿಸಲು ಆಗುತ್ತಿಲ್ಲ ಎಂದು ಆರೋಪಿಸಿದರು.

ನಮ್ಮ ಪಕ್ಷ ಸತತ ಮೂರು ಮರು ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದು, 2028ರ ವಿಧಾನಸಭಾ ಚುನಾವಣೆಯಲ್ಲಿಯೂ ಸಹ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ. ಹೈಕಮಾಂಡ್‌ ತೀರ್ಮಾನವೇ ನಮ್ಮ ಪಕ್ಷದ ಅಂತಿಮ ತೀರ್ಮಾನವಾಗಿದೆ. ಹೀಗಾಗಿ ಸಿಎಂ ಮತ್ತು ಡಿಸಿಎಂ ವಿಚಾರದಲ್ಲಿಯೂ ಹೈಕಮಾಂಡ್‌ನ ನಿರ್ಧಾರವೇ ಅಂತಿಮವಾಗಿದೆ. ಆದರೆ ಬಿಜೆಪಿಯಲ್ಲಿರುವಷ್ಟು ಗೊಂದಲ ನಮ್ಮಲ್ಲಿ ಇಲ್ಲ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

32 mins ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

1 hour ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

2 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

2 hours ago

ಕಿಡ್ನಿ ಮರು ಜೋಡಣೆಗೆ ಸಹಾಯ ಹಸ್ತ ಕೋರಿದ ಬಡ ಕುಟುಂಬ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಸ್ವಂತ ಮಗನಿಗೆ ತಾಯಿ ಕಿಡ್ನಿ ಜೋಡಣೆಗೆ…

2 hours ago

ಹನೂರು| ಭಿಕ್ಷೆ ಬೇಡುತ್ತಿದ್ದ ಬಾಲಕನ ರಕ್ಷಣೆ: ಮಕ್ಕಳ ರಕ್ಷಣಾ ಘಟಕದವರಿಂದ ಬಾಲಮಂದಿರಕ್ಕೆ ಸೇರ್ಪಡೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಬಾಲಕನನ್ನು ಮಕ್ಕಳ ರಕ್ಷಣಾ ಘಟಕದ…

2 hours ago