ರಾಜ್ಯ

ಕಾಂಗ್ರೆಸ್‌ನ ನಿರ್ದಿಷ್ಟ ಸಮುದಾಯದ ಓಲೈಕೆಯೇ ನಾಗಮಂಗಲ ಘಟನೆಗೆ ಕಾರಣ: ಎಚ್.ಡಿ ಕುಮಾರಸ್ವಾಮಿ

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ಉಗ್ರವಾಗಿ ಖಂಡಿಸುತ್ತೇನೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಕುರಿತು ಸಾಮಾಜಿಕ ಜಾಲಾತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಅವರು, ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ ಎಂದು ಕಿಡಿಕಾರಿದ್ದಾರೆ.

ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಆ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ನಾಗಮಂಗಲದಲ್ಲಿ ಈ ಹೇಯ ಘಟನೆ ನಡೆದಿದೆ. ಇಂತಹ ಓಲೈಕೆ, ತುಷ್ಟೀಕರಣ ರಾಜಕಾರಣ ನಿಲ್ಲಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ದಿನಗಳು ದೂರವಿಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರು ಶಾಂತಿ ಕಾಪಾಡಬೇಕು ಎನ್ನುವುದು ನನ್ನ ಕಳಕಳಿಯ ಮನವಿ. ತಕ್ಷಣವೇ ಪಟ್ಟಣದಲ್ಲಿ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಬೇಕು. ಅಲ್ಲದೆ; ಈ ಪ್ರಕರಣ ನೆಪದಲ್ಲಿ ವಿರೋಧ ಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ಪೊಲೀಸರು ದರ್ಪ ತೋರಿದರೆ ಸಹಿಸುವ ಪ್ರಶ್ನೆ ಇಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago