ರಾಜ್ಯ

ನಾಗಮಂಗಲ ಗಲಭೆ ಪೂರ್ವ ನಿಯೋಜಿತ ಕೃತ್ಯ: BJP ಸತ್ಯ ಶೋಧನಾ ಸಮಿತಿ ವರದಿ

ಬೆಂಗಳೂರು: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಗಲಭೆ ಸಂಬಂಧಪಟ್ಟಂತೆ ಬಿಜೆಪಿಯಿಂದ ರಚನೆಯಾಗಿದ್ದ ಸತ್ಯ ಶೋಧನಾ ಸಮಿತಿಯು ಗುರುವಾರ ಪಕ್ಷಕ್ಕೆ ತನ್ನ ವರದಿಯನ್ನು ಸಲ್ಲಿಸಿದೆ.

ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಮಿತಿಯ ಸದಸ್ಯರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಗೆ ವರದಿ ಹಸ್ತಾಂತರಿಸಿದೆ. ಸಮಿತಿಯ ಸದಸ್ಯರಾದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ನೇತೃತ್ವದಲ್ಲಿ ಮಾಜಿ ಸಚಿವರಾದ ಭೈರತಿ ಬಸವರಾಜ್, ಕೆ.ಸಿ.ನಾರಾಯಣಗೌಡ, ಬಿಜೆಪಿ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನ್ ಗೌಡ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ವರದಿ ತಯಾರಿಸಿದ್ದಾರೆ.

ವರದಿಯಲ್ಲಿ ನಾಗಮಂಗಲ ಗಲಭೆಯು ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಪೊಲೀಸ್ ಮತ್ತು ರಾಜ್ಯ ಸರ್ಕಾರದ ವೈಫಲ್ಯವೇ ಇದಕ್ಕೆ ಕಾರಣ ಎಂದು ತಿಳಿಸಿದೆ.

ವರದಿಯ ಉಲ್ಲೇಖಿತ ಅಂಶಗಳು ಹೀಗಿವೆ…..

ಬಾಂಗ್ಲಾ ದೇಶದಿಂದ ಬಂದಿರುವ ಕೆಲವು ಕಿಡಿಗೇಡಿಗಳು ಇದರಲ್ಲಿ ಶಾಮೀಲಾಗಿದ್ದಾರೆ.

ದೇಶದ್ರೋಹಿಗಳು ಗಲಭೆ ಎಬ್ಬಿಸಲು ಮುಂಚಿತವಾಗಿಯೇ ಕತ್ತಿ, ತಲ್ವಾರ್, ಪೆಟ್ರೋಲ್ ಬಾಂಬ್, ಮಾಸ್ಕ್‌  ಗಳನ್ನು ಖರೀದಿ ಮಾಡಿದ್ದಾರೆ.

ಕಳೆದ ವರ್ಷ ಇಲ್ಲಿ ಗಲಭೆ ನಡೆದಿದ್ದರೂ ಗುಪ್ತಚರ ವಿಭಾಗ ಮತ್ತು ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ.

ಗಲಭೆಗೆ ರಾಜ್ಯ ಸರ್ಕಾರದ ವೈಫಲ್ಯವೂ ಪ್ರಮುಖ ಕಾರಣವಾಗಿದೆ.

ಘಟನೆ ಬಗ್ಗೆ ತಿಳಿದಿದ್ದರು ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ನಿಯೋಜಿಸಲಿಲ್ಲ.

ಗಲಭೆಯಲ್ಲಿ ಪೊಲೀಸರಿಗೂ ಗಾಯಗಳಾಗಿವೆ.

ಗಲಭೆ ಕುರಿತು ಎನ್‌ಐಎ ತನಿಖೆ ಆಗಬೇಕು.

ಗಲಭೆಯಿಂದ ಒಟ್ಟು 2.66 ಕೋಟಿ ಮೌಲ್ಯದ ಆಸ್ತಿ ನಾಶ.

ಇದೇ ವರದಿಯನ್ನು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೂ ಸಲ್ಲಿಸಲು ಬಿಜೆಪಿ ಚಿಂತಿಸಿದೆ. ಜೊತೆಗೆ ಘಟನೆಗೆ ಕೇರಳ ಮೂಲದ ಲಿಂಕ್‌ ಬಗ್ಗೆಯೂ ಉಲ್ಲೇಖಿಸಿ ಎನ್‌ಐಎ ತನಿಖೆ ಬಗ್ಗೆ ಒತ್ತಡ ಹೇರಲಿದೆ ಎಂದು ಮೂಲಗಳು ತಿಳಿಸಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ: ಎಸ್.ಟಿ.ಸೋಮಶೇಖರ್‌

ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

18 mins ago

ಬಿಹಾರದ ನಳಂದಾ ದೇಗುಲದಲ್ಲಿ ಕಾಲ್ತುಳಿತ: 8 ಮಂದಿ ಸಾವು

ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ.…

32 mins ago

ಕೌಟುಂಬಿಕ ಕಲಹ: ಬೆಂಗಳೂರಿನಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ…

52 mins ago

ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್‌: ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ

ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್‌ ತಂದರು. ಹಳ್ಳಿಗಳಲ್ಲೂ ಗ್ಯಾಸ್‌ ಬಂತು. ಈಗ…

1 hour ago

ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್‌ನ ಇಸ್ಪಹಾನ್‌ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…

2 hours ago

ಓದುಗರ ಪತ್ರ: ಟೋಲ್ ದರ ಹೆಚ್ಚಳ ಗಾಯದ ಮೇಲೆ ಬರೆ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್‌ನಿಂದ ಅನ್ವಯವಾಗುವಂತೆ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು…

3 hours ago