ರಾಜ್ಯ

ನಾಗಮಂಗಲ ಗಲಭೆ ಪೂರ್ವ ನಿಯೋಜಿತ ಕೃತ್ಯ: BJP ಸತ್ಯ ಶೋಧನಾ ಸಮಿತಿ ವರದಿ

ಬೆಂಗಳೂರು: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಗಲಭೆ ಸಂಬಂಧಪಟ್ಟಂತೆ ಬಿಜೆಪಿಯಿಂದ ರಚನೆಯಾಗಿದ್ದ ಸತ್ಯ ಶೋಧನಾ ಸಮಿತಿಯು ಗುರುವಾರ ಪಕ್ಷಕ್ಕೆ ತನ್ನ ವರದಿಯನ್ನು ಸಲ್ಲಿಸಿದೆ.

ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಮಿತಿಯ ಸದಸ್ಯರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಗೆ ವರದಿ ಹಸ್ತಾಂತರಿಸಿದೆ. ಸಮಿತಿಯ ಸದಸ್ಯರಾದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ನೇತೃತ್ವದಲ್ಲಿ ಮಾಜಿ ಸಚಿವರಾದ ಭೈರತಿ ಬಸವರಾಜ್, ಕೆ.ಸಿ.ನಾರಾಯಣಗೌಡ, ಬಿಜೆಪಿ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನ್ ಗೌಡ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ವರದಿ ತಯಾರಿಸಿದ್ದಾರೆ.

ವರದಿಯಲ್ಲಿ ನಾಗಮಂಗಲ ಗಲಭೆಯು ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಪೊಲೀಸ್ ಮತ್ತು ರಾಜ್ಯ ಸರ್ಕಾರದ ವೈಫಲ್ಯವೇ ಇದಕ್ಕೆ ಕಾರಣ ಎಂದು ತಿಳಿಸಿದೆ.

ವರದಿಯ ಉಲ್ಲೇಖಿತ ಅಂಶಗಳು ಹೀಗಿವೆ…..

ಬಾಂಗ್ಲಾ ದೇಶದಿಂದ ಬಂದಿರುವ ಕೆಲವು ಕಿಡಿಗೇಡಿಗಳು ಇದರಲ್ಲಿ ಶಾಮೀಲಾಗಿದ್ದಾರೆ.

ದೇಶದ್ರೋಹಿಗಳು ಗಲಭೆ ಎಬ್ಬಿಸಲು ಮುಂಚಿತವಾಗಿಯೇ ಕತ್ತಿ, ತಲ್ವಾರ್, ಪೆಟ್ರೋಲ್ ಬಾಂಬ್, ಮಾಸ್ಕ್‌  ಗಳನ್ನು ಖರೀದಿ ಮಾಡಿದ್ದಾರೆ.

ಕಳೆದ ವರ್ಷ ಇಲ್ಲಿ ಗಲಭೆ ನಡೆದಿದ್ದರೂ ಗುಪ್ತಚರ ವಿಭಾಗ ಮತ್ತು ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ.

ಗಲಭೆಗೆ ರಾಜ್ಯ ಸರ್ಕಾರದ ವೈಫಲ್ಯವೂ ಪ್ರಮುಖ ಕಾರಣವಾಗಿದೆ.

ಘಟನೆ ಬಗ್ಗೆ ತಿಳಿದಿದ್ದರು ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ನಿಯೋಜಿಸಲಿಲ್ಲ.

ಗಲಭೆಯಲ್ಲಿ ಪೊಲೀಸರಿಗೂ ಗಾಯಗಳಾಗಿವೆ.

ಗಲಭೆ ಕುರಿತು ಎನ್‌ಐಎ ತನಿಖೆ ಆಗಬೇಕು.

ಗಲಭೆಯಿಂದ ಒಟ್ಟು 2.66 ಕೋಟಿ ಮೌಲ್ಯದ ಆಸ್ತಿ ನಾಶ.

ಇದೇ ವರದಿಯನ್ನು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೂ ಸಲ್ಲಿಸಲು ಬಿಜೆಪಿ ಚಿಂತಿಸಿದೆ. ಜೊತೆಗೆ ಘಟನೆಗೆ ಕೇರಳ ಮೂಲದ ಲಿಂಕ್‌ ಬಗ್ಗೆಯೂ ಉಲ್ಲೇಖಿಸಿ ಎನ್‌ಐಎ ತನಿಖೆ ಬಗ್ಗೆ ಒತ್ತಡ ಹೇರಲಿದೆ ಎಂದು ಮೂಲಗಳು ತಿಳಿಸಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

10 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

18 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

19 hours ago