ಬೆಂಗಳೂರು: ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಪರಾಧಿಗಳ ಮೇಲುಗೈ ಆಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ರಾಜ್ಯ ಪೊಲೀಸರು ಸತ್ವ ಕಳೆದುಕೊಂಡಿದ್ದಾರೆ. ಪೊಲೀಸರ ಕೈಯನ್ನು ರಾಜ್ಯ ಸರ್ಕಾರ ಕಟ್ಟಿ ಹಾಕಿದೆ. ಸರ್ಕಾರ ಹೇಳುವ ಕೆಲಸವನ್ನು ರಾಜ್ಯ ಪೊಲೀಸರು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ದೇಶದ್ರೋಹಕ್ಕೆ ಕುಮ್ಮಕ್ಕು ಕೊಡುವ ಸರ್ಕಾರ ಅಧಿಕಾರದಲ್ಲಿದೆ ಎಂದು ಟೀಕೆ ಮಾಡಿದರು.
ಇಷ್ಟೆಲ್ಲಾ ಘಟನೆಗಳು ಆದರೂ ರಾಜ್ಯ ಸರ್ಕಾರ ಓಲೈಕೆ ರಾಜಕಾರಣ ಮಾಡುತ್ತಿದೆ. ರಾಜ್ಯದಲ್ಲಿ ದೇಶದ್ರೋಹ ಮಾಡಿದರೂ ಅಡ್ಡಿ ಇಲ್ಲ ಎಂಬಂತಾಗಿದೆ ಎಂದು ಕಿಡಿಕಾರಿದರು.
ನಾಗಮಂಗಲದಲ್ಲಿ ಗಣಪತಿಗೆ ಅವಮಾನ ಮಾಡಿದವರ ವಿರುದ್ಧ ಕ್ರಮ ಆಗಲಿ. ಗಲಭೆಗೆ ಕೇರಳದ ನಂಟು ಇದೆ. ಎನ್ಐಎಗೆ ತನಿಖೆ ವಹಿಸಿದರೆ ಸತ್ಯ ಹೊರಗೆ ಬರಲಿದೆ ಎಂದು ಆಗ್ರಹಿಸಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…