ಬೆಂಗಳೂರು: ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಪರಾಧಿಗಳ ಮೇಲುಗೈ ಆಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ರಾಜ್ಯ ಪೊಲೀಸರು ಸತ್ವ ಕಳೆದುಕೊಂಡಿದ್ದಾರೆ. ಪೊಲೀಸರ ಕೈಯನ್ನು ರಾಜ್ಯ ಸರ್ಕಾರ ಕಟ್ಟಿ ಹಾಕಿದೆ. ಸರ್ಕಾರ ಹೇಳುವ ಕೆಲಸವನ್ನು ರಾಜ್ಯ ಪೊಲೀಸರು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ದೇಶದ್ರೋಹಕ್ಕೆ ಕುಮ್ಮಕ್ಕು ಕೊಡುವ ಸರ್ಕಾರ ಅಧಿಕಾರದಲ್ಲಿದೆ ಎಂದು ಟೀಕೆ ಮಾಡಿದರು.
ಇಷ್ಟೆಲ್ಲಾ ಘಟನೆಗಳು ಆದರೂ ರಾಜ್ಯ ಸರ್ಕಾರ ಓಲೈಕೆ ರಾಜಕಾರಣ ಮಾಡುತ್ತಿದೆ. ರಾಜ್ಯದಲ್ಲಿ ದೇಶದ್ರೋಹ ಮಾಡಿದರೂ ಅಡ್ಡಿ ಇಲ್ಲ ಎಂಬಂತಾಗಿದೆ ಎಂದು ಕಿಡಿಕಾರಿದರು.
ನಾಗಮಂಗಲದಲ್ಲಿ ಗಣಪತಿಗೆ ಅವಮಾನ ಮಾಡಿದವರ ವಿರುದ್ಧ ಕ್ರಮ ಆಗಲಿ. ಗಲಭೆಗೆ ಕೇರಳದ ನಂಟು ಇದೆ. ಎನ್ಐಎಗೆ ತನಿಖೆ ವಹಿಸಿದರೆ ಸತ್ಯ ಹೊರಗೆ ಬರಲಿದೆ ಎಂದು ಆಗ್ರಹಿಸಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…