ಬೆಂಗಳೂರು: ನಾಗಮಂಗಲದಲ್ಲಿ ಗಣೇಶೋತ್ಸವದ ವೇಲೆ ಘರ್ಷಣೆ ನಡೆದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಘರ್ಷಣೆ ನಡೆಸಿದ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ನಾಗಮಂಗಲದಲ್ಲಿ ನಡೆದ ಘರ್ಷಣೆಯು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ದುಷ್ಕೃತ್ಯವಾಗಿದೆ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದೆ. ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದಿದ್ದಾರೆ.
ಕಳೆದ ಒಂದೂವರೆ ವರ್ಷಗಳಿಂದ ರಾಜ್ಯದಲ್ಲಿ ಯಾವುದೇ ಹಿಂಸಾಚಾರ ನಡೆದಿರಲಿಲ್ಲ. ನಮ್ಮ ನಾಡನ್ನು ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅವರನ್ನು ಸುಮ್ಮನೆ ಬಿಡುವ ಮಾತೇ ಇಲ್ಲ. ಆ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕರು ಪ್ರಚೋದನೆಗೆ ಒಳಗಾಗದೇ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕಾರ ನೀಡಬೇಕು ಎಂದು ಮಂಡ್ಯ ಜನತೆಗೆ ಮನವಿ ಮಾಡಿದ್ದಾರೆ.
ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್ ಕಿ ಬಾತ್ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ…
ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…
ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…
ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಹಲವು ಗ್ರಾಮಗಳಲ್ಲಿ…
ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ದಲಿತ ಮುಖ್ಯಮಂತ್ರಿ ಕೂಗು ಜೋರಾಗಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಸಿಎಂ ಮಾಡುವಂತೆ…
ಮೈಸೂರು : ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ನಿಷೇಧಿಸಬೇಕೆಂದು ಆಗ್ರಹಿಸಿ ಮೈಸೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.…