ಬೆಂಗಳೂರು: ನಾಗಮಂಗಲದಲ್ಲಿ ನಡೆದ ಗಲಭೆ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಮಾಜಿ ಸಂಸದ ಡಿ.ಕೆ.ಸುರೇಶ್ ತಿರುಗೇಟು ಕೊಟ್ಟಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಗಮಂಗಲದ ಗಲಭೆಯನ್ನು ಕುಮಾರಸ್ವಾಮಿ ಅವರೇ ಮಾಡಿಸಿರಬಹುದು. ನಾನು ಕೂಡ ಅವರ ಮೇಲೆ ಆರೋಪ ಮಾಡಬಹುದಲ್ಲ ಎಂದು ಟಾಂಗ್ ನೀಡಿದರು.
ಎಚ್ಡಿಕೆ ಪ್ರತಿ ವಾರ ಮಂಡ್ಯ ಜಿಲ್ಲೆಗೆ ಭೇಟಿ ನೀಡುತ್ತಾರೆ. ಆದ್ದರಿಂದ ಅವರೇ ಗಲಾಟೆ ಮಾಡಿಸಿರಬಹುದು. ಕುಮಾರಸ್ವಾಮಿ ಪ್ರತಿ ನಿತ್ಯ ಒಂದೊಂದು ಹೇಳಿಕೆ ಕೊಡುತ್ತಾರೆ ಎಂದು ಕಿಡಿಕಾರಿದರು.
ಈ ಹಿಂದೆ ಹಲವಾರು ಗಲಭೆಗಳಾಗಿದ್ದವು. ಆಗ ಕುಮಾರಸ್ವಾಮಿ ಅವರು, ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದರು. ಈಗ ಏನೇ ಘಟನೆಗಳಾದರೂ ಕಾಂಗ್ರೆಸ್ ಪಕ್ಷ ಹಾಗೂ ನಾಯಕರ ಮೇಲೆ ಗೂಬೆ ಕೂರಿಸುತ್ತಾರೆ. ಏನನ್ನೂ ತಿಳಿಯದೇ ಆರೋಪ ಮಾಡುವುದು ತಪ್ಪು. ಘಟನೆ ಸಂಬಂಧ ಹಲವಾರು ಜನರ ಬಂಧನವಾಗಿದೆ. ವಿಚಾರಣೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ ಎಂದರು.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…