ರಾಜ್ಯ

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಇಂದಿನಿಂದಲೇ ಬಂದ್ : ಸಚಿವ ಖಂಡ್ರೆ

ಬೀದರ್ : ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಅವರು, ಸರಗೂರು ತಾಲೂಕು ಮೊಳೆಯೂರು ವಲಯದ ಹಳೆ ಹೆಗ್ಗೋಡಿಲು ಗ್ರಾಮದ ಬಳಿ ಇಂದು ಬೆಳಗ್ಗೆ ದಂಡನಾಯಕ (55) ಎಂಬುವವರು ಹುಲಿ ದಾಳಿಯಿಂದ ಮೃತಪಟ್ಟಿರುವ ಬಗ್ಗೆ ತೀವ್ರ ನೋವು ವ್ಯಕ್ತಪಡಿಸಿದ್ದು, ಮುಂದಿನ ಆದೇಶದವರೆಗೆ ಎರಡೂ ಕಡೆ ಸಫಾರಿ ಬಂದ್ ಮಾಡಿ, ಅಧಿಕಾರಿ ಮತ್ತು ಸಿಬ್ಬಂದಿಯ ಸೇವೆಯನ್ನು ಹುಲಿ ಸೆರೆ ಕಾರ್ಯಾಚರಣೆ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಬಂಡೀಪುರ, ನಾಗರಹೊಳೆ ಅರಣ್ಯದಂಚಿನಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಹುಲಿ ದಾಳಿಯಿಂದ ಮೂರು ಅಮೂಲ್ಯ ಜೀವ ಹಾನಿ ಆಗಿರುವುದು ಅತೀವ ನೋವು ತಂದಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಇದನ್ನೂ ಓದಿ:-ಚಲನಚಿತ್ರ ರಾಜ್ಯಪ್ರಶಸ್ತಿ , ರಾಷ್ಟ್ರ ಪ್ರಶಸ್ತಿ ಪ್ರದಾನ ನಡುವೆ ಎನಿತೋ ಅಂತರ!

ಹುಲಿ ದಾಳಿಯ ನಂತರ ಅಕ್ಟೋಬರ್ 27ರಂದು ಬಂಡೀಪುರದಲ್ಲಿ ಅಧಿಕಾರಿಗಳ ಸಭೆ ನಡೆಸಿ ಹಾಗೂ ಕಳೆದ 2ರಂದು ಚಾಮರಾಜನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮತ್ತು ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ ಹಾಗೂ ಶಾಸಕರುಗಳ ಸಮ್ಮುಖದಲ್ಲಿ ರೈತರು, ಸಾರ್ವಜನಿಕರೊಂದಿಗೆ ಸಂವಾದ ನಡೆಸಿ, ಹುಲಿ ಸೆರೆಗೆ ಎಲ್ಲ ಸಾಧ್ಯ ಕ್ರಮ ಕೈಗೊಳ್ಳುವಂತೆ ಸೂಚಿಸುವುದರ ಜೊತೆಗೆ ಸಫಾರಿ ಬಂದ್ ಮಾಡುವ ಎಚ್ಚರಿಕೆಯನ್ನೂ ನೀಡಿದ್ದರೂ ಮತ್ತೊಂದು ದಾರುಣ ಘಟನೆ 0ಸಂಭವಿಸಿರುವುದು ಆಘಾತ ತಂದಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಇಂದಿನಿಂದಲೇ ನಾಗರಹೊಳೆ ಮತ್ತು ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲು ಮತ್ತು ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಟ್ರಕ್ಕಿಂಗ್ (ಚಾರಣ) ಸ್ಥಗಿತಗೊಳಿಸಲು ಹಾಗೂ ಬಂಡೀಪುರ, ನಾಗರಹೊಳೆ ಸಫಾರಿಯ ಕಾರ್ಯದಲ್ಲಿ ನಿಯೋಜನೆಗೊಂಡಿರುವ ಎಲ್ಲ ಅಧಿಕಾರಿಗಳು ಮತ್ತು ವಾಹನ ಚಾಲಕರ ಸಹಿತ ಎಲ್ಲ ಸಿಬ್ಬಂದಿ ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜನೆ ಮಾಡಲು ಹಾಗೂ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಮತ್ತು ಹುಲಿ ಯೋಜನೆಯ ನಿರ್ದೇಶಕರು ಸ್ಥಳದಲ್ಲೇ ಮೊಕ್ಕಾಂ ಹೂಡಿ ಪದೆ ಪದೇ ದಾಳಿ ಮಾಡುತ್ತಿರುವ ಹುಲಿಯನ್ನು ಹಿಡಿಯಲು ಕ್ರಮ ಕೈಗೊಳ್ಳುವಂತೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೈಸೂರು ಆಕಾಶವಾಣಿ ಪ್ರಸರಣ ಸಾಮರ್ಥ್ಯ ಹೆಚ್ಚಿಸಿ

ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ…

1 min ago

ಓದುಗರ ಪತ್ರ: ಆಟ… ಕಿರೀಟ !

ಟಿ-೨೦ವಿಶ್ವಕಪ್‌ನಲ್ಲಿ ಕಿವೀಸ್ ಕಿವಿ ಹಿಂಡಿದ ಇಂಡಿಯಾ ಆಡಿದ್ದು ದಾಖಲೆಗಳ ಆಟ ! ಅದಕ್ಕೇ ಒಲಿಯಿತು ಭಾರತಕ್ಕೆ ವಿಶ್ವಕಪ್ ಕಿರೀಟ !…

4 mins ago

ಓದುಗರ ಪತ್ರ: ಕೊಲ್ಲಿ ಯುದ್ಧ: ವಿಶ್ವ ಸಂಸ್ಥೆಯ ಮೌನವೇಕೆ?

ಇರಾನ್ ಮೇಲೆ ಇಸ್ರೇಲ್-ಅಮೆರಿಕ ರಾಷ್ಟ್ರಗಳು ಯುದ್ಧ ನಡೆಸುತ್ತಿದ್ದು, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲ ಖಮೇನಿ ಅವರನ್ನು ಹತ್ಯೆ ಮಾಡಿವೆ. ಇದರಿಂದ…

6 mins ago

ಓದುಗರ ಪತ್ರ: ಕಾಲೇಜು ಮೈದಾನದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಬೇಡ

ಮೈಸೂರಿನ ಮಹಾರಾಜ ಕಾಲೇಜಿಗೆ ೧೩೭ ವರ್ಷಗಳ ಇತಿಹಾಸವಿದೆ. ಕಾಲೇಜಿನಲ್ಲಿ ಉತ್ತಮ ಬೋಧನಾ ವ್ಯವಸ್ಥೆಯೂ ಇದ್ದು, ಪ್ರತಿವರ್ಷ ನೂರಾರು ವಿದ್ಯಾರ್ಥಿಗಳು ಇಲ್ಲಿ…

8 mins ago

ಗೂಗಲ್ ಮಹಾತ್ಮೆ: ಗೂಗಲ್ ಮಾತ್ರ ಸತ್ಯ, ಉಳಿದೆಲ್ಲವೂ ಮಿಥ್ಯ?

ರಮಾನಂದ ಶರ್ಮ ಯಾವುದೋ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಟೆಕ್ಕಿಯೊಬ್ಬರು ವೈದ್ಯರ ಬಳಿ ಹೋಗಿದ್ದರಂತೆ. ವೈದ್ಯರು ಅವರನ್ನು ಸ್ಥೂಲವಾಗಿ ಪರೀಕ್ಷಿಸಿ, ಮೂರು…

3 hours ago

ಕೆಎಸ್‌ಐಸಿ: ೧೫ ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಅಂತ್ಯ

ತಿ.ನರಸೀಪುರ: ಪಟ್ಟಣದ ಕೆಎಸ್‌ಐಸಿ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ವಿರೋಽಸಿ ಕಳೆದ ೧೫ ದಿನಗಳಿಂದ ವಿವಿಧ ಸಂಘಟನೆಗಳವರು ನಡೆಸುತ್ತಿದ್ದ ಪ್ರತಿಭಟನೆ…

3 hours ago